ತೇಜಸ್ವಿ ಸೂರ್ಯಗೆ ಮಹಿಳಾ ಆಯೋಗದಿಂದ ನೋಟಿಸ್ ಜಾರಿ

ಬೆಂಗಳೂರು: ಮಹಿಳಾ ಆಯೋಗ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯಗೆ ವಿಚಾಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.

ಮಹಿಳಾ ಆಯೋಗ ಬುಧವಾರ ಖುದ್ದು ಹಾಜರಾಗುವಂತೆ ತೇಜಸ್ವಿ ಸೂರ್ಯಗೆ ನೋಟಿಸ್ ಜಾರಿಮಾಡಿದ್ದು, ಬೆಳಗ್ಗೆ 12 ಗಂಟೆಗೆ ಹಾಜರಾಗುವಂತೆ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ನೋಟಿಸ್ ಜಾರಿ ಮಾಡಿದ್ದಾರೆ. ಕೆಪಿಸಿಸಿ ಮಹಿಳಾ ಘಟಕದಿಂದ ದೂರು ನೀಡಿದ್ದ ಹಿನ್ನೆಲೆಯಲ್ಲಿ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ.

ಟ್ವಿಟ್ಟರ್ ನಲ್ಲಿ ಮಹಿಳೆಯೊಬ್ಬರು ತೇಜಸ್ವಿ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಈ ಆರೋಪದ ಆಧಾರದಲ್ಲಿ ಕಾಂಗ್ರೆಸ್ ಮಹಿಳಾ ಘಟಕ ತೇಜಸ್ವಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಿತ್ತು. ಈ ದೂರಿನನ್ವಯ ನೋಟಿಸ್ ಜಾರಿ ಮಾಡಲಾಗಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ದೂರು ಬಂದಿದೆ. ಕೆಪಿಸಿಸಿ ಮಹಿಳಾ ಘಟಕದ ದೂರನ್ನು ಸ್ವೀಕರಿಸಿದ್ದು, ನೊಂದ ಮಹಿಳೆಯನ್ನು ಕರೆದು ಮಾತನಾಡಿಸುತ್ತೇನೆ. ತೇಜಸ್ವಿ ಸೂರ್ಯ ಅವರನ್ನು ವಿಚಾರಣೆಗೆ ಕರೆಯಲಾಗುವುದು ಎಂದು ನಾಗಲಕ್ಷ್ಮಿ ಬಾಯಿ ಈ ಹಿಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದರು.

Comments

Leave a Reply

Your email address will not be published. Required fields are marked *