ಅಮಿತ್ ಶಾಗೆ ಶೂ ಎತ್ತಿಕೊಟ್ಟ ಬಿಜೆಪಿ ನಾಯಕನ ವೀಡಿಯೋ ವೈರಲ್

ಹೈದರಾಬಾದ್: ತೆಲಂಗಾಣ ಬಿಜೆಪಿ ಮುಖ್ಯಸ್ಥ ಬಂಡಿ ಸಂಜಯ್ ಕುಮಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಶೂ ಎತ್ತಿಕೊಟ್ಟ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಹೌದು. ಅಮಿತ್ ಶಾ ಅವರು ಸಿಕಂದರಾಬಾದ್‍ನಲ್ಲಿರುವ ಉಜೈನಿ ಮಹಾಕಾಳಿ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದರು. ದೇಗುಲದಲ್ಲಿ ಪೂಜೆ ಮುಗಿಸಿ ಹೊರ ಬರುತ್ತಿದ್ದಂತೆಯೇ ಕೇಂದ್ರ ಸಚಿವ ಜೊತೆಗಿದ್ದ ಸಂಜಯ್ ಕುಮಾರ್ ಕೂಡಲೇ ಓಡಿ ಹೋಗಿ ಶಾ ಅವರ ಶೂ ಎತ್ತಿ ಕೊಟಿದ್ದಾರೆ. ಈ ದೃಶ್ಯವನ್ನು ದೇವಸ್ಥಾನದ ಪಕ್ಕದ ಕಟ್ಟಡದಲ್ಲಿದ್ದವರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಸದ್ಯ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದ್ದು, ಪರ ವಿರೋಧ ಕಾಮೆಂಟ್ ಗಳು ಬರುತ್ತಿವೆ. ಇದನ್ನೂ ಓದಿ: ಕೊರೊನಾ ವೇಳೆ ಜನರಿಂದ ಸುಲಿಗೆ – 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್

ತೆಲಂಗಾಣ ಸಚಿವ ಹಾಗೂ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರ ಕೆಟಿ ರಾಮರಾವ್ ಟ್ವೀಟ್ ಮಾಡಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ತೆಲಂಗಾಣದ ಸ್ವಾಭಿಮಾನಕ್ಕೆ ಧಕ್ಕೆ ತಂದವರನ್ನು ತಿರಸ್ಕರಿಸಲು ಮತ್ತು ತೆಲಂಗಾಣದ ಸ್ವಾಭಿಮಾನವನ್ನು ಕಾಪಾಡಲು ಸಮಾಜದ ಎಲ್ಲಾ ವರ್ಗಗಳು ಸಿದ್ಧವಾಗಿವೆ ಎಂದು ಹೇಳಿದರು. ಅಲ್ಲದೆ ಇನ್ನೂ ಹಲವಾರು ಮಂದಿ ಕಾಮೆಂಟ್ ಮಾಡಿದ್ದಾರೆ.

ಟಿಆರ್ ಎಸ್‍ನ ಸಾಮಾಜಿಕ ಮಾಧ್ಯಮ ಸಂಚಾಲಕ ವೈ ಸತೀಶ್ ರೆಡ್ಡಿಅವರು, ರಾಜ್ಯ ಬಿಜೆಪಿ ಮುಖ್ಯಸ್ಥರ ಕಾರ್ಯವು ಗುಲಾಮಗಿರಿ ಅತ್ಯುತ್ತಮವಾಗಿದೆ ಎಂದು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *