ದೇಶದ ಪ್ರಗತಿಗಾಗಿ ಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯಿರಿ: ಸಿಎಂ ಕೆಸಿಆರ್

ಹೈದರಾಬಾದ್: ದೇಶದ ಪ್ರಗತಿಗಾಗಿ ಕೇಂದ್ರದಿಂದ ಆಡಳಿತರೂಢ ಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯುವಂತೆ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ನಾಯಕತ್ವದಲ್ಲಿ ಬದಲಾವಣೆ ತರಲು ಅವಶ್ಯಕತೆಯಿದೆ. ಅಭಿವೃದ್ಧಿ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳು ವಿಫಲವಾಗಿದೆ. ವಾಸ್ತವವಾಗಿ ನಮಗೆ ಹೊಸ ಸಂವಿಧಾನದ ಅಗತ್ಯವಿದ್ದು, ಸಂವಿಧಾನವನ್ನು ಮರಳಿ ಬರೆಯಬೇಕಿದೆ ಎಂದು ಕಿಡಿಕಾರಿದರು.

bjp - congress

ಉತ್ತರಪ್ರದೇಶದದಲ್ಲಿ ಬಿಜೆಪಿ ಸೋತರೆ ಅವರ ವರ್ಚಸ್ಸು ಗಣನೀಯವಾಗಿ ಕಡಿಮೆಯಾಗಲಿದೆ. ಒಂದು ವೇಳೆ ಬಿಜೆಪಿ ಗೆದ್ದರೆ ಅವರಿಗೆ ದುರಹಂಕಾರ ಹೆಚ್ಚುತ್ತದೆ ಎಂದು ಟೀಕಿಸಿದರು.

ನಾನು ರಾಷ್ಟ್ರಮಟ್ಟದಲ್ಲಿ ನಾಯಕತ್ವ ಬದಲಾವಣೆಗಾಗಿ ಅನೇಕ ನಾಯಕರನ್ನು ಭೇಟಿ ಮಾಡಿದ್ದೇನೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಆದರೆ ದೇಶದ ಯುವಜನತೆ ಎಚ್ಚೆತ್ತುಕೊಂಡು ಬದಲಾವಣೆ ತರಲು ಮನಸ್ಸು ಮಾಡಬೇಕಿದೆ ಎಂದರು. ಇದನ್ನೂ ಓದಿ: Budget 2022 : ಮೋದಿ ಸೂಚನೆಯಂತೆ ಜನರಿಂದ ಹೆಚ್ಚುವರಿ ತೆರಿಗೆ ಸಂಗ್ರಹ ಇಲ್ಲ

2019ರ ಲೋಕಸಭೆ ಚುನಾವಣೆಗೂ ಮುನ್ನ ಕೆಸಿಆರ್ ಅವರು ಕೇರಳ ಸಿಎಂ ಪಿಣರಾಯಿ ವಿಜಯನ್, ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಮತ್ತು ಮಮತಾ ಬ್ಯಾನರ್ಜಿ ಸೇರಿದಂತೆ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಪ್ರಯತ್ನಿಸಿದ್ದರು. ಇದನ್ನೂ ಓದಿ: ಬಿಜೆಪಿ ಶಾಸಕ ನಿತೇಶ್ ರಾಣೆಗೆ ಜಾಮೀನು ನಿರಾಕರಿಸಿದ ಕೋರ್ಟ್

Comments

Leave a Reply

Your email address will not be published. Required fields are marked *