ಕೈ ನಾಯಕರ ಮನೆ ಮೇಲೆ ಐಟಿ ದಾಳಿ: ಎಷ್ಟು ಕೋಟಿ ಹಣ ಸಿಕ್ಕಿದೆ ಗೊತ್ತಾ?

ನವದೆಹಲಿ/ಬೆಂಗಳೂರು: ಕಾಂಗ್ರೆಸ್ ನಾಯಕರ ಮನೆ ಮೇಲೆ ದಾಳಿ ನಡೆಸಿದ ಬಳಿಕ ಬರೋಬ್ಬರಿ 10 ಕೋಟಿ ರೂ. ಹಣವನ್ನು ಜಪ್ತಿ ಮಾಡಲಾಗಿದೆ ಎಂದು ಐಟಿ ಇಲಾಖೆಯ ಮೂಲಗಳನ್ನು ಆಧಾರಿಸಿ ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಇಂಧನ ಸಚಿವ ಡಿಕೆ ಶಿವಕುಮಾರ್ ಆಪ್ತ ದೆಹಲಿಯಲ್ಲಿರುವ ಆಂಜನೇಯ ನಿವಾಸದ ಮೇಲೆ ದಾಳಿ ನಡೆಸಿ ನಡೆಸಿದ್ದು ಒಟ್ಟು 7. 5 ಕೋಟಿ ರೂ. ಹಣವನ್ನು ಜಪ್ತಿ ಮಾಡಲಾಗಿದೆ.

ಲೋಕಸಭೆಯಲ್ಲಿ ಐಟಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡವು. ಈ ವೇಳೆ ಹಣಕಾಸು ಸಚಿವ ಅರುಣ್ ಜೇಟ್ಲಿ ಮಾತನಾಡಿ ಐಟಿ ದಾಳಿ ವೇಳೆ ದಾಖಲೆಗಳನ್ನು ಮನೆಯವರು ಹರಿದು ಹಾಕುತ್ತಿರುವುದು ಬೆಳಕಿಗೆ ಬಂದಿದೆ ಎಂದು ತಿಳಿಸಿದರು.

ಬೆಳ್ಳಂ ಬೆಳಗ್ಗೆ ಬೆಂಗಳೂರು ನಗರದಲ್ಲಿ ಐಟಿ ಅಧಿಕಾರಿಗಳು ಸಚಿವ ಡಿಕೆ ಶಿವಕುಮಾರ್ ಮನೆ ಸೇರಿದಂತೆ 10 ಕಡೆ ದಾಳಿ ನಡೆಸಿದ್ದಾರೆ. ಸದಾಶಿವನಗರ ಮನೆ, ಕನಕಪುರದ ಮನೆಗಳ ಮೇಲೆ ದಾಳಿ ನಡೆದಿದೆ. ಕನಕಪುರದ ಸಂಸದ ಡಿ.ಕೆ ಸುರೇಶ್ ಮನೆ ಮೇಲೂ ದಾಳಿ ನಡೆದಿದೆ.

ಇದನ್ನೂ ಓದಿ: ದಾಳಿ ನಡೆದಿರುವುದು ಸಚಿವ ಡಿಕೆಶಿ ಮೇಲೆ ಮಾತ್ರ, ಗುಜರಾತ್ ಶಾಸಕರಿಗೂ ಇದಕ್ಕೂ ಸಂಬಂಧವಿಲ್ಲ: ಐಟಿ

Comments

Leave a Reply

Your email address will not be published. Required fields are marked *