ನಿಯಂತ್ರಣ ತಪ್ಪಿ ಬೈಕ್ ಸಮೇತ ಬಾವಿಗೆ ಬಿದ್ದು ಸವಾರ ಸಾವು

ಚಿಕ್ಕೋಡಿ: ಸವಾರನೋರ್ವ ನಿಯಂತ್ರಣ ತಪ್ಪಿ ಬೈಕ್ ಸಮೇತ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರದ ಮಠ ಗಲ್ಲಿಯಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ತಾತ್ಯಾಸಾಬ (58) ಪಾಟೀಲ ಬಾವಿಗೆ ಬಿದ್ದು ಸಾವನ್ನಪ್ಪಿರುವ ಮೃತ ದುರ್ದೈವಿ. ಟಿವಿಎಸ್ ಎಕ್ಸ್ ಎಲ್ ದ್ವಿಚಕ್ರ ವಾಹನದ ಮೇಲೆ ತಾತ್ಯಾಸಾಬ ಪಾಟೀಲ ತಮ್ಮ ಮನೆಗೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.

ಪಟ್ಟಣದ ಮಧ್ಯದಲ್ಲಿಯೇ ಇರುವ ಬಾಳು ಬಿದ್ದ ಬಾವಿಗೆ ತಾತ್ಯಾಸಾಬ್ ಬಿದ್ದಿದ್ದಾರೆ. ಇದನ್ನು ನೋಡಿದ ಕೆಲವರು ಬಾವಿಗೆ ಇಳಿಯುಲು ಹಿಂದೆಟು ಹಾಕಿ, ಪೊಲೀಸ್ ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬರುವಷ್ಟರಲ್ಲಿ ತಾತ್ಯಾಸಾಬ ಮೃತಪಟ್ಟಿದ್ದರು.

ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಚರಣೆ ನಡೆಸಿ ತಾತ್ಯಾಸಾಬ ಪಾಟೀಲ ಶವ ಹಾಗೂ ಟವಿಎಸ್ ಹೊರ ತೆಗೆದಿದ್ದಾರೆ. ಬಾವಿಗೆ ತಡೆಗೋಡೆ ನಿರ್ಮಾಣ ಮಾಡಿರಲ್ಲ, ಹೀಗಾಗಿ ತಾತ್ಯಾಸಾಬ ಬಾವಿಗೆ ಬಿದ್ದಿದ್ದಾರೆ. ಈ ಘಟನೆಗೆ ಪುರಸಭೆ ಅಧಿಕಾರಿಗಳ ನಿರ್ಲಕ್ಷವೇ ಕಾರಣ ಸ್ಥಳೀಯರು ಆರೋಪಿಸಿದ್ದಾರೆ. ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *