ಕಾಲು ಜಾರಿ ಕೆರೆಗೆ ಬಿದ್ದು ಬಾಲಕ ಸಾವು

ಹಾವೇರಿ: ಕಾಲು ಜಾರಿ ಕೆರೆಗೆ ಬಿದ್ದು ಆರು ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶಾಡಗುಪ್ಪಿ ಗ್ರಾಮದಲ್ಲಿ ನಡೆದಿದೆ.

ಚಂದ್ರು ಪಡೆಪ್ಪನವರ (6) ಮೃತ ಬಾಲಕ. ತಾಯಿ ಜೊತೆಗೆ ಬಾಲಕ ಚಂದ್ರು ಜಮೀನಿಗೆ ಹೋಗಿದ್ದನು. ತಾಯಿ ಕೆಲಸ ಮಾಡುತ್ತಿದ್ದ ವೇಳೆ ಚಂದ್ರು ಕೆರೆ ಕಡೆಗೆ ಹೋದಾಗ ಆಟವಾಡುತ್ತ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾನೆ.

ಸ್ಥಳದಲ್ಲಿ ಮೃತ ಬಾಲಕ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ವಿಷಯ ತಿಳಿದ ಆಡೂರು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *