ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರ್: ಯುವಕ ಸಾವು

ಮಂಡ್ಯ: ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನೊಳಗಿದ್ದ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಶ್ರೀರಂಗಪಟ್ಟಣದ ಕಿರಂಗೂರು ವೃತ್ತದ ಬಳಿ ಅಪಘಾತ ನಡೆದಿದ್ದು, ನೀಲನಹಳ್ಳಿ ಗ್ರಾಮದ 23 ವರ್ಷದ ಯುವಕ ಅಭಿಷೇಕ್ ಮೃತಪಟ್ಟಿದ್ದಾರೆ. ರಸ್ತೆ ಬದಿಯ ಲಾರಿಯೊಂದು ನಿಂತಿತ್ತು. ಈ ವೇಳೆ ವೇಗವಾಗಿ ಬಂದ ಕಾರು ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಪರಿಣಾಮ ಕಾರಿನೊಳಗಿದ್ದ ಅಭಿಷೇಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತಕ್ಕೆ ಕಾರು ಚಾಲಕನ ಅತೀ ವೇಗ ಮತ್ತು ಅಜಾಗರೂಕತೆಯೆ ಕಾರಣ ಎಂದು ತಿಳಿದು ಬಂದಿದೆ. ಈ ಸಂಬಂಧ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *