ಕೆ.ಸಿ.ವ್ಯಾಲಿ ಯೋಜನೆಯ ಮೂಲಕ ಬಂತು ಮೊದಲ ನೀರು- ಕುಣಿದು ಕುಪ್ಪಳಿಸಿದ ಕೋಲಾರದ ಮಕ್ಕಳು

ಕೋಲಾರ: ಕೋರಮಂಗಲ ಚೆಲ್ಲಘಟ್ಟ (ಕೆ.ಸಿ.ವ್ಯಾಲಿ) ಏತ ನೀರಾವರಿ ಯೋಜನೆ ಅಡಿ ಕೋಲಾರ ಜಿಲ್ಲೆಯ ನರಸಾಪುರದ ಗ್ರಾಮಕ್ಕೆ ಮೊದಲ ಬಾರಿಗೆ ನೀರು ಬಂದಿದೆ.

ತಮ್ಮ ಗ್ರಾಮದ ಕೆರೆಗೆ ಕೊನೆಗೂ ನೀರು ಬಂದ ಹಿನ್ನೆಲೆಯಲ್ಲಿ ನರಸಾಪುರ ಹೋಬಳಿಯ ಲಕ್ಷ್ಮೀಪುರ ಮಕ್ಕಳು ಕುಪ್ಪಳಿಸಿದ್ದಾರೆ. ಜೂನ್ 7 ರಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೆ.ಸಿ.ವ್ಯಾಲಿ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಲಿದ್ದು, ಈ ಹಿನ್ನೆಯಲ್ಲಿ ಲಕ್ಷ್ಮೀಪುರ ಕೆರೆಗೆ ನೀರು ಹರಿಸಲಾಗುತ್ತಿದೆ. ಮೊದಲ ಬಾರಿ ಕೊಳವೆ ಮೂಲಕ ನೀರು ಬರುತ್ತಿರುವುದನ್ನು ಗ್ರಾಮಸ್ಥರು ಹಾಗೂ ಮಕ್ಕಳು ಕುತೂಹಲದಿಂದ ವಿಕ್ಷೀಸಿದರು.

2016 ರಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕೆ.ಸಿ.ವ್ಯಾಲಿ ನೀರಾವರಿ ಯೋಜನೆಗೆ ಚಾಲನೆ ನೀಡಿದ್ದರು. 12 ಸಾವಿರ ಕೋಟಿ ವೆಚ್ಚದಲ್ಲಿ ಜಿಲ್ಲೆಯ 126 ಕೆರೆಗಳಿಗೆ ನೀರು ಹರಿಸುವ ಯೋಜನೆಯ ಉದ್ದೇಶವಾಗಿದೆ. ಸ್ವಾತಂತ್ರ್ಯ ನಂತರ ಬಯಲು ಸೀಮೆ ಕೋಲಾರಕ್ಕೆ ಸಿಕ್ಕ ಮೊದಲ ನೀರಾವರಿ ಯೋಜನೆ ಇದಾಗಿದೆ.

Comments

Leave a Reply

Your email address will not be published. Required fields are marked *