20 ವರ್ಷ ಆಡಳಿತ ನಡೆಸಿದ್ದ ಕಾಂಗ್ರೆಸ್‍ಗೆ ಮೀಸಲಾತಿ ಹೆಚ್ಚಿಸಲಾಗಿಲ್ಲ: ಮುನಿರತ್ನ

ಕೋಲಾರ: ಅಹಿಂದ ಎಂದು ಹೋರಾಟ ಮಾಡಿದವರಿಗೆ ಕಳೆದ ಇಪ್ಪತ್ತು ವರ್ಷಗಳಿಂದ ಮೀಸಲಾತಿ ಹೆಚ್ಚಿಸಲು ಸಾಧ್ಯವಾಗಲಿಲ್ಲ ಎಂದು ಕಾಂಗ್ರೆಸ್ (Congress) ಹಾಗೂ ಸಿದ್ದರಾಮಯ್ಯ (Siddaramaiah) ಅವರ ಹೆಸರನ್ನು ಹೇಳದೇ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ (Munirathna) ಅವರು ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.

ಇಂದು ಕೋಲಾರದಲ್ಲಿ (Kolar) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ (BharatJodoYatra) ಪಾದಯಾತ್ರೆಯಿಂದ ಬಿಜೆಪಿ ಪಕ್ಷಕ್ಕೆ ಯಾವುದೇ ಭಯವಿಲ್ಲ. ಅವರು ಯಾವುದೇ ಪಾದಯಾತ್ರೆ ಮಾಡಿದರೂ ಬಿಜೆಪಿಗೆ (BJP) ಪಕ್ಷಕ್ಕೆ ಏನೂ ಆಗುವುದಿಲ್ಲ. ಅಲ್ಲದೇ ಸರ್ಕಾರ ಬಹಳ ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದೆ. ಇಪ್ಪತ್ತು ವರ್ಷಗಳಿಂದ ಮಾಡಲಾಗದೆ ಮೀಸಲಾತಿ ಹೆಚ್ಚಳವನ್ನು ಬಿಜೆಪಿ ಮಾಡಿದೆ ಎಂದಿದ್ದಾರೆ. ಇದನ್ನೂ ಓದಿ: ಅನಿಲ್ ದೇಶಮುಖ್ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ನಾಳೆ ವಿಚಾರಣೆ

ಅಹಿಂದಾ ಎಂದು ಹೋರಾಟ ಮಾಡಿದವರು ಮೀಸಲಾತಿ ಹೆಚ್ಚಳ ಮಾಡಲಾಗಲಿಲ್ಲ, ಬಿಜೆಪಿ ಪಕ್ಷ ಮೀಸಲಾತಿ ಹೆಚ್ಚಿಗೆ ಮಾಡಬೇಕಾಯಿತು, ಇದನ್ನು ಕಾಂಗ್ರೆಸ್ ಪಕ್ಷ ಸ್ವಾಗತ ಮಾಡಬೇಕು ಜೊತೆಗೆ ಸ್ವಾಗತ ಮಾಡುವ ದೊಡ್ಡ ಮನಸ್ಸಿರಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾರು ನಿಲ್ಲಿಸಿ ಅಭಿಮಾನಿಯಿಂದ ತಾಯಿಯ ಫೋಟೋ ಸ್ವೀಕರಿಸಿದ ಮೋದಿ

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *