ಸಂತರ ಸಹಾಯದಿಂದ ರಾಮಮಂದಿರ ನಿರ್ಮಾಣ ಖಚಿತ- ಶೋಭಾ ಕರಂದ್ಲಾಜೆ

ಉಡುಪಿ: ಕೇಂದ್ರ ಸರ್ಕಾರ, ಉತ್ತರಪ್ರದೇಶ ಸರ್ಕಾರ ಮತ್ತು ಎಲ್ಲ ಸಂತರ ಸಹಾಯದಿಂದ ರಾಮಮಂದಿರ ನಿರ್ಮಾಣ ಆಗುವುದು ನಿಶ್ಚಿತ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಧರ್ಮ ಸಂಸತ್ ಅಧಿವೇಶನದಲ್ಲಿ ಪಾಲ್ಗೊಂಡ ಶೋಭಾ ಕರಂದ್ಲಾಜೆ ಹೊರಗೆ ಬಂದು ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲ ಸಂತರು ರಾಮಮಂದಿರಕ್ಕೆ ಒತ್ತುಕೊಟ್ಟು ಮಾತನಾಡಿದ್ದಾರೆ. ವರ್ಷದ ಒಳಗೆ ರಾಮ ಮಂದಿರ ದೇಶದಲ್ಲಿ ನಿರ್ಮಾಣವಾಗುತ್ತದೆ ಎಂಬ ನಂಬಿಕೆ ಬಂದಿದೆ. ರವಿಶಂಕರ್ ಗುರೂಜಿ ಈಗಾಗಲೇ ಸಂಧಾನ ಪ್ರಕ್ರಿಯೆಯನ್ನು ನಡೆಸುತ್ತಿದ್ದು ಇದರಲ್ಲಿ ಅವರು ಯಶಸ್ವಿಯಾಗಲಿದ್ದಾರೆ ಎಂದರು.

ನಮ್ಮ ಮೇಲೆ ಶ್ರೀರಾಮಚಂದ್ರ, ಆಂಜನೇಯರ ಆಶೀರ್ವಾದ ಇದೆ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಇದೆ. ಎರಡು ಸಮುದಾಯದವರು ಸೇರಿ ಕೋರ್ಟ್‍ನಿಂದ ಹೊರಗೆ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಸಂಧಾನದ ಮೂಲಕ ಇತ್ಯರ್ಥ ಮಾಡಿಕೊಳ್ಳಬೇಕು ಎಂದರು.

Comments

Leave a Reply

Your email address will not be published. Required fields are marked *