ಬಿಜೆಪಿ ಸರ್ಕಾರ ಸ್ಥಾಪನೆಯಿಂದ ರಾಜ್ಯದ ಶಾಪ ವಿಮೋಚನೆಯಾಗಿದೆ : ಡಿವಿಎಸ್

ಬೆಂಗಳೂರು: ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವುದರಿಂದ ರಾಜ್ಯದ ಶಾಪ ವಿಮೋಚನೆಯಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.

ಯಡಿಯೂರಪ್ಪನವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ದೆಹಲಿಯಿಂದ ಆಗಮಿಸಿದ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಹಲವು ದಿನಗಳ ಹಿಂದೆಯೇ ಬಿ.ಎಸ್.ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಬೇಕಿತ್ತು. ಆದರೆ ಈಗ ಆಗುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯುತ್ತಿರುವುದರಿಂದ ರಾಜ್ಯದ ಶಾಪ ವಿಮೋಚನೆಯಾಗಿದೆ ಎಂದು ತಿಳಿಸಿದರು.

ಮೈತ್ರಿ ಸರ್ಕಾರದ ಆಂತರಿಕ ಜಗಳದಿಂದಾಗಿ ಅಭಿವೃದ್ಧಿ ಕುಂಠಿತವಾಗಿದೆ. ರಾಜ್ಯದಲ್ಲಿ ಅಧಿಕಾರಕ್ಕೇರುತ್ತಿರುವುದು ದಕ್ಷಿಣ ಭಾರತದಲ್ಲಿ ಬಿಜೆಪಿಗೆ ದೊಡ್ಡ ಶಕ್ತಿ ತಂದಿದೆ. ಮುಖ್ಯಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮಕ್ಕೆ ಎಲ್ಲರೂ ಬರಬೇಕು. ಆದರೆ, ಯಾವ ಮುಖವಿಟ್ಟುಕೊಂಡು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಬರುತ್ತಾರೆ. 14 ತಿಂಗಳ ಕಾಲ ರಾಜ್ಯದಲ್ಲಿ ದುರಾಡಳಿತ ನಡೆಸಿದ್ದಾರೆ ಎಂದು ಮೈತ್ರಿ ಸರ್ಕಾರ ಹಾಗೂ ನಾಯಕರ ವಿರುದ್ಧ ಹರಿಹಾಯ್ದರು

Comments

Leave a Reply

Your email address will not be published. Required fields are marked *