ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಸಿಲುಕಿ ರೈತ ಸಾವು

ವಿಜಯಪುರ: ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ರೈತರೊಬ್ಬರು ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಕರವಿನಾಳ ಗ್ರಾಮದಲ್ಲಿ ನಡೆದಿದೆ.

ಸಾಯಬಣ್ಣ ನಾಯ್ಕೋಡಿ (65) ಮೃತ ರೈತ. ಗುರುವಾರ ಸಂಜೆ ಭಾರೀ ಮಳೆಯಾಗಿತ್ತು. ಇದ್ರಿಂದಾಗಿ ಗ್ರಾಮದ ಹಳ್ಳ ತುಂಬಿ ಹರಿತ್ತಿತ್ತು. ಗುರುವಾರ ಸಂಜೆ ಜಮೀನಿನಿಂದ ಹೊರ ಬರುತ್ತಿದ್ದ ವೇಳೆ ಸಾಯಬಣ್ಣ ಹಳ್ಳ ದಾಟುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಇಂದು ಬೆಳಗ್ಗೆ ಸಾಯಬಣ್ಣರ ಮೃತದೇಹದ ಹಳ್ಳದ ಮುಳ್ಳುಗಳ ಮಧ್ಯೆ ಪತ್ತೆಯಾಗಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Comments

Leave a Reply

Your email address will not be published. Required fields are marked *