ಹುಟ್ಟುಹಬ್ಬದ ದಿನವೇ ಪ್ರಾಣ ಬಿಟ್ಟ ಪುಟ್ಟ ಬಾಲಕಿ

ಚಾಮರಾಜನಗರ: ಪುಟ್ಟ ಬಾಲಕಿ ತನ್ನ ಹುಟ್ಟುಹಬ್ಬದ ದಿನವೇ ಪ್ರಾಣ ಬಿಟ್ಟ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ನಿವೇದಿತಾ(3) ಮೃತಪಟ್ಟ ಬಾಲಕಿ. ಚಾಮರಾಜನಗರದ ಕೆಂಗಾಕಿ ಗ್ರಾಮದಲ್ಲಿ ನಿವೇದಿತಾ ಕುಟುಂಬ ತೋಟದ ಮನೆಯಲ್ಲಿ ವಾಸವಾಗಿದ್ದರು. ಇಂದು ನಿವೇದಿತಾ ತನ್ನ 3ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಬೇಕಿತ್ತು. ಆದರೆ ಆಟ ಆಡುವಾಗ ನಿವೇದಿತಾ ಪಂಪ್ ಸೆಟ್ ಸ್ಪರ್ಶಿಸಿ ಸಾವನ್ನಪ್ಪಿದ್ದಾಳೆ. ಇದನ್ನೂ ಓದಿ:  ರಸ್ತೆಯಲ್ಲಿ ಕಂದಕ ನಿರ್ಮಿಸಿ ಪಂಚಾಯತಿ ಸದಸ್ಯೆ ಪತಿ ದರ್ಬಾರ್

ಕುಟುಂಬದಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ವೇಳೆ ಶೋಕದ ವಾತಾವರಣ ಆವರಿಸಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ:  ವಿಕ್ರಾಂತ್ ರೋಣ ಡಿಸೆಂಬರ್ ನಲ್ಲಿ ಬಿಡುಗಡೆ ಸಾಧ್ಯತೆ

ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಈ ಕುರಿತು ಪರಿಶೀಲನೆ ಮಾಡುತ್ತಿದ್ದಾರೆ.

Comments

Leave a Reply

Your email address will not be published. Required fields are marked *