ಮಹಿಳೆಯನ್ನ ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ಹಾಕಿದ ದುಷ್ಕರ್ಮಿಗಳು

ಕಲಬುರಗಿ: ಮಹಿಳೆಯೋರ್ವಳನ್ನು ಕೊಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ದಾರುಣ ಘಟನೆ ಕಲಬುರಗಿ (Kalaburagi) ತಾಲೂಕಿನ ಇಟಗಾ ಗ್ರಾಮದ ಬಳಿ ನಡೆದಿದೆ.

ಜ್ಯೋತಿ (29) ಹತ್ಯೆಯಾದ ಮಹಿಳೆ. ಕಲಬುರಗಿ ನಗರದ ಸಂಗಮೇಶ್ವರ ಕಾಲೋನಿ ನಿವಾಸಿ ಆಗಿರುವ ಜ್ಯೋತಿಗೆ ಕಳೆದ 10 ವರ್ಷದ ಹಿಂದೆ ಮದುವೆ ಆಗಿತ್ತು. ಈಕೆ 5 ವರ್ಷದಿಂದ ಗಂಡನ ಮನೆ ಬಿಟ್ಟು ತವರು ಮನೆಯಲ್ಲಿ ವಾಸಿಸುತ್ತಿದ್ದಳು ಎನ್ನಲಾಗಿದೆ. ಇದನ್ನೂ ಓದಿ: ವಿಶ್ವದ ಅತ್ಯಂತ ಕಲುಷಿತ ನಗರ ಕುಖ್ಯಾತಿಗೆ ಪಾತ್ರವಾದ ದೆಹಲಿ

ಗುರುವಾರ ಬೆಳಗ್ಗೆ ಮನೆಯಿಂದ ಹೊರ ಹೋಗಿದ್ದ ಜ್ಯೋತಿ, ಮಧ್ಯಾಹ್ನ ಸುಟ್ಟ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಪೊಲೀಸರು ಕೌಟುಂಬಿಕ ಕಲಹದ ಹಿನ್ನೆಲೆ ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಬಿಜೆಪಿ ಉಳಿಯಬೇಕಾದ್ರೆ ವಿಜಯೇಂದ್ರನನ್ನ ರಾಜ್ಯಾಧ್ಯಕ್ಷ ಸ್ಥಾನದಿಂದ ತೆಗೀಬೇಕು: ಯತ್ನಾಳ್

ಈ ಕುರಿತು ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ಹಾವೇರಿ ಜಿಲ್ಲೆಗೂ ಕಾಲಿಟ್ಟ ವಕ್ಫ್ ಆಸ್ತಿ ವಿವಾದ- ಊರು ಬಿಟ್ಟ ಮುಸ್ಲಿಂ ಕುಟುಂಬಗಳು