ಕುಡಿದು ಬಂದು ವಾಹನಗಳ ಪುಡಿಪುಡಿ – ಕೇಳಿದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

-ಪುಂಡರಿಂದ ಬೆಂಗಳೂರು ಜನ ತತ್ತರ

ಬೆಂಗಳೂರು: ನಗರದಲ್ಲಿ ದಿನೇ ದಿನೇ ಪುಂಡರ ಹಾವಳಿ ಹೆಚ್ಚಾಗುತ್ತಿದೆ. ಈ ಪುಂಡರ ಹಾವಳಿ ತಡೆಯೋದೇ ಪೊಲೀಸರಿಗೊಂದು ಸವಾಲಾಗಿ ಪರಿಣಮಿಸಿದೆ. ಬುಧವಾರ ತಡರಾತ್ರಿ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯ ಯಡಿಯೂರಿನ ಕಾಲೋನಿಯಲ್ಲಿ ಪುಂಡರು ತಮ್ಮ ಆಟಾಟೋಪ ಮೆರೆದಿದ್ದಾರೆ.

ಮೂರು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ರಸ್ತೆಯ ಅಕ್ಕ ಪಕ್ಕದಲ್ಲಿ ನಿಲ್ಲಿಸಿದ್ದ ಇಪ್ಪತ್ತಕ್ಕೂ ಹೆಚ್ಚು ಕಾರು, ಆಟೋಗಳ ಮೇಲೆ ಲಾಂಗು ಮಚ್ಚಿನಿಂದ ಮನಸೋ ಇಚ್ಚೆ ಬೀಸಿ ಗಾಜನ್ನ ಪುಡಿಗೈದಿದ್ದಾರೆ. ಅಷ್ಟೇ ಅಲ್ಲದೆ ದಾರಿಹೋಕರ ಮೇಲೂ ಲಾಂಗುಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ನೂತನ್ ಗೌಡ ಎಂಬವರ ಮೇಲೂ ಲಾಂಗು ಬೀಸಿ ಗಂಭೀರ ರೀತಿಯಲ್ಲಿ ಗಾಯಗೊಳಿಸಿದ್ದಾರೆ. ಅದೇ ರೀತಿ ಗಂಭೀರ ಗಾಯಗೊಂಡಿರುವ ಆನಂದ್ ಎಂಬವರು ಕೂಡ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಈ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರಿಗೆ ಈಗಾಗಲೇ ಆರೋಪಿಗಳ ಸುಳಿವು ಪತ್ತೆ ಹಚ್ಚಿದ್ದಾರೆ. ಸದ್ಯ ಆರೋಪಿಗಳ ಪತ್ತೆಗಾಗಿ ಎಸಿಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡ ರಚಿಸಲಾಗಿದೆ.

Comments

Leave a Reply

Your email address will not be published. Required fields are marked *