ರೈಲಿನಲ್ಲಿ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕ್ತಿದ್ದವರಿಗೆ ಬಿತ್ತು ಗೂಸಾ

ಬೆಂಗಳೂರು: ಜನಸಂದಣಿ ನಡುವೆ ಕಳ್ಳರು ತಮ್ಮ ಕೈಚಳಕ ತೋರಿಸುವ ಮೂಲಕ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕ್ತಾರೆ. ಪರ್ಸ್ ಜೊತೆಗೆ ಮೊಬೈಲ್ ಮತ್ತು ಬ್ಯಾಗ್ ಗಳನ್ನು ಕ್ಷಣಾರ್ಧದಲ್ಲಿಯೇ ಕದ್ದು ಮರೆಯಾಗ್ತಾರೆ. ಹೀಗೆ ಕಳ್ಳತನ ಮಾಡಲು ಹೋಗಿ ಕಳ್ಳನೊಬ್ಬ ಪ್ರಯಾಣಿಕರಿಗೆ ಸಿಕ್ಕಿಬಿದ್ದಿರುವ ಘಟನೆ ಬೆಂಗಳೂರಿನ ಕೆಂಗೇರಿ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ.

ರೈಲ್ವೇ ನಿಲ್ದಾಣಗಳಲ್ಲಿ ಮತ್ತು ರೈಲಿನಲ್ಲಿ ಪ್ರಯಾಣಿಸುತ್ತಿದ್ದವರ ಜೇಬಿಗೆ ಕತ್ತರಿ ಹಾಕುತ್ತಿದ್ದ ಇಬ್ಬರನ್ನು ಹಿಡಿದು ಸಾರ್ವಜನಿಕರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಚನ್ನಪಟ್ಟಣದಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಕಳ್ಳತನ ಮಾಡಿ ಕಳ್ಳರು ಪರಾರಿಯಾಗಲು ಯತ್ನಿಸಿದ್ದನು. ಈ ವೇಳೆ ಪ್ರಯಾಣಿಕರು ಕಳ್ಳರನ್ನು ಹಿಡಿದು ಥಳಿಸಿ ಪೊಲೀಸರ ವಶಕ್ಕೆ ನೀಡಿದ್ದಾರೆ.

ಆರೋಪಿಗಳು ರೈಲ್ವೆ ನಿಲ್ದಾಣ ಮತ್ತು ರೈಲುಗಳಲ್ಲಿ ಮೊಬೈಲ್, ಪರ್ಸ್, ಬ್ಯಾಗ್ ಗಳನ್ನು ಕದಿಯುತ್ತಿದ್ದ ಎಂದು ಹೇಳಲಾಗಿದೆ.

Comments

Leave a Reply

Your email address will not be published. Required fields are marked *