ಬೆಂಗ್ಳೂರಿಗರೇ ಎಚ್ಚರ: ಮನೆಗೆ ನುಗ್ಗಿ ಮಾಲೀಕನ ಬರ್ಬರ ಹತ್ಯೆ – ಬಾಲಕನ ತಲೆಗೆ ಹೊಡೆದ ಕಳ್ಳ

ಬೆಂಗಳೂರು: ಕಳ್ಳತನ ಮಾಡಲು ಮನೆಗೆ ನುಗ್ಗಿದ್ದ ಕಳ್ಳ ಮನೆ ಮಾಲೀಕನನ್ನ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಅನಂತರಾಮ್ ಕೊಲೆಯಾದ ದುರ್ದೈವಿ. ಯಲಹಂಕ ನ್ಯೂ ಟೌನ್‍ನಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಕಳ್ಳ ರಾಡ್‍ನಿಂದ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಅನಂತರಾಮ್ ಅವರನ್ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ.

ಐದು ಮನೆಗಳಲ್ಲಿ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿ ಒಂದು ಮನೆಗೆ ನುಗ್ಗಿ ಬಾಲಕನ ತಲೆಗೆ ಹೊಡೆದು ಹಲ್ಲೆ ಮಾಡಿದ್ದಾನೆ. ಹಲ್ಲೆಯಿಂದ ಬಾಲಕನ ತಲೆಗೆ ಗಂಭೀರ ಪೆಟ್ಟು ಬಿದ್ದಿದೆ. ಆರೋಪಿ ಮಾನಸಿಕ ಅಸ್ವಸ್ಥನಾಗಿದ್ದಾನೆಂದು ಹೇಳಲಾಗಿದೆ.

ಘಟನೆಯಿಂದ ಯುಲಹಂಕ ನ್ಯೂ ಟೌನ್ ನಿವಾಸಿಗಳು ಭಯಭೀತರಾಗಿದ್ದಾರೆ. ಈ ಬಗ್ಗೆ ಯಲಹಂಕ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Comments

Leave a Reply

Your email address will not be published. Required fields are marked *