ಅಗ್ನಿಪಥ್ ಭಾರತೀಯ ಸೇನೆಯನ್ನೇ ಮುಗಿಸುತ್ತೆ, ಯುವಕರನ್ನು ಕೊಲ್ಲುತ್ತದೆ: ಪ್ರಿಯಾಂಕಾ ಗಾಂಧಿ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ `ಅಗ್ನಿಪಥ್’ ಯೋಜನೆಯು ಭಾರತೀಯ ಸೇನೆಯನ್ನು ನಾಶ ಮಾಡುತ್ತದೆ. ಯುವಕರನ್ನು ಕೊಲ್ಲುತ್ತದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಎಚ್ಚರಿಸಿದ್ದಾರೆ.

ಕಾಂಗ್ರೆಸ್ ಸತ್ಯಾಗ್ರಹವನ್ನುದ್ದೇಶಿಸಿ ಮಾತನಾಡಿದ ಅವರು, ಪ್ರತಿಭಟನಾಕಾರರು ಯಾವುದೇ ಕಾರಣಕ್ಕೂ ತಮ್ಮ ಹೋರಾಟ ನಿಲ್ಲಿಸಬಾರದು. ತಮ್ಮ ಆಂದೋಲನವನ್ನು ಶಾಂತಿಯುತವಾಗಿ ಮುಂದುವರಿಸಬೇಕು, ಸರ್ಕಾರವನ್ನು ಪತನಗೊಳಿಸಬೇಕು ಎಂದು ಕರೆ ನಿಡಿದ್ದಾರೆ. ಇದನ್ನೂ ಓದಿ: ಸುರಂಗ ಮಾರ್ಗದಲ್ಲಿ ಬಿದ್ದಿದ್ದ ಕಸವನ್ನು ಬರಿಗೈಯಲ್ಲೇ ತೆಗೆದ ಮೋದಿ

ಅಗ್ನಿಪಥ್ ಯೋಜನೆಯು ದೇಶದ ಯುವಕರನ್ನು ಕೊಲ್ಲುತ್ತದೆ, ಸೈನ್ಯವನ್ನು ಮುಗಿಸುತ್ತದೆ. ದಯವಿಟ್ಟು ಈ ಸರ್ಕಾರದ ಉದ್ದೇಶವನ್ನು ನೋಡಿ. ಪ್ರಜಾಸತ್ತಾತ್ಮಕ, ಶಾಂತಿಯುತ ಮತ್ತು ಅಹಿಂಸಾತ್ಮಕ ಮಾರ್ಗಗಳ ಮೂಲಕ ಸರ್ಕಾರವನ್ನು ಉರುಳಿಸಿ. ದೇಶದ ಆಸ್ತಿಯನ್ನು ರಕ್ಷಿಸುವ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಂತ್ರಿಗಳು ತಮ್ಮ ಮಕ್ಕಳನ್ನು ಅಗ್ನಿಪಥ್ ಯೋಜನೆಗೆ ಕಳಿಸಲಿ ನೋಡೋಣ: ಡಿಕೆಶಿ ಚಾಲೆಂಜ್

ಹೋರಾಟ ಮಾಡುವುದು ನಿಮ್ಮ ಹಕ್ಕು, ದೇಶವನ್ನು ರಕ್ಷಿಸುವುದು ನಿಮ್ಮ ಕರ್ತವ್ಯ, ಕಾಂಗ್ರೆಸ್‌ನ ಪ್ರತಿಯೊಬ್ಬ ನಾಯಕರೂ ಮತ್ತು ಕಾರ್ಯಕರ್ತರೂ ನಿಮ್ಮೊಂದಿಗೆ ಇದ್ದಾರೆ ಎಂದು ಹೇಳಿದ್ದಾರೆ.

ಅಗ್ನಿಪಥ್ ಯೋಜನೆ ವಿರೋಧಿಸಿ ಕಾಂಗ್ರೆಸ್ ಸಂಸದರು ಹಾಗೂ ಮುಖಂಡರು ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದರು.

Live Tv

Comments

Leave a Reply

Your email address will not be published. Required fields are marked *