ದಿಗಂತ್ ಗೆ ಮೂರು ಗಂಟೆಗಳ ಶಸ್ತ್ರ ಚಿಕಿತ್ಸೆ : ಅಬ್ಸರ್ವೇಶನ್ ನಲ್ಲಿ ನಟ

ಮೊನ್ನೆ ಗೋವಾದಲ್ಲಿ ಎರಡು ದಿನಗಳ ಹಿಂದೆ ಸ್ಫೋರ್ಟ್ ಇಂಜುರಿ ಮಾಡಿಕೊಂಡಿದ್ದ ನಟ ದಿಗಂತ್ ಅವರನ್ನು ನಿನ್ನೆ ಬೆಂಗಳೂರಿಗೆ ಕರೆದುಕೊಂಡು ಬಂದು ಸೂಕ್ತ ಚಿಕಿತ್ಸೆ ನೀಡಲಾಗಿದೆ. ನಿನ್ನೆ ಮೂರುಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿರುವ ವೈದ್ಯರು, ಸದ್ಯ ಅಬ್ಸರ್ವೇಶನ್ ನಲ್ಲಿ ಇಟ್ಟಿದ್ದಾರೆ. ಶಸ್ತ್ರ ಚಕಿತ್ಸೆ ಯಶಸ್ವಿಯಾಗಿ ನಡೆದಿದ್ದು, ಶೀಘ್ರದಲ್ಲೇ ಅವರು ಗುಣಮುಖರಾಗಲಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ದಿಗಂತ್ ಅವರಿಗೆ ಸೂಕ್ತ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಅವರೀಗ ಆರೋಗ್ಯದಿಂದ ಇದ್ದಾರೆ. ಆದಷ್ಟು ಬೇಗ ಚೇತರಿಸಿಕೊಳ್ಳುತ್ತಾರೆ. ಆತಂಕ ಪಡುವ ಅಗತ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದು, ಅವರು ಐಸಿಯುನಲ್ಲಿ ಇರುವಂತಹ ಫೋಟೋವೊಂದನ್ನು ಬಿಡುಗಡೆ ಮಾಡಿದ್ದಾರೆ. ದಿಗಂತ್ ಕೂಡ ಗೆಲುವಿನ ಚಿಹ್ನೆ ತೋರಿಸಿ, ತಾವು ಆರೋಗ್ಯದಿಂದ ಇರುವುದಾಗಿ ಈ ಮೂಲಕ ತಿಳಿಸಿದ್ದಾರೆ. ಅಬ್ಸರ್ವೇಶನ್ ಮುಗಿದ ಬಳಿಕೆ ಜನರಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗುತ್ತದೆಯಂತೆ. ಇದನ್ನೂ ಓದಿ:ದಿಗಂತ್ ಬಾಳಲ್ಲಿ ನಡೀತು ಮತ್ತೊಂದು ದುರಂತ

ಸಮ್ಮರ್ ಸಾಲ್ಟ್ ಮಾಡುವಾಗ ಕುತ್ತಿಗೆ ಭಾಗಕ್ಕೆ ಪೆಟ್ಟು ಮಾಡಿಕೊಂಡಿದ್ದ ದಿಗಂತ್ ಅವರಿಗೆ ಕೂಡಲೇ ಗೋವಾದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಇನ್ನೂ ಹೆಚ್ಚಿನ ಚಿಕಿತ್ಸೆ ಅವಶ್ಯವಿದ್ದ ಕಾರಣದಿಂದಾಗಿ ಗೋವಾದಿಂದ ಬೆಂಗಳೂರಿಗೆ ಅವರನ್ನು ಕರೆತರಲಾಗಿತ್ತು. ಪ್ರಾಣಕ್ಕೆ ಯಾವುದೇ ಅಪಾಯವಿಲ್ಲವಾದ್ದರಿಂದ ಅವರನ್ನು ಗೋವಾದಿಂದ ಬೆಂಗಳೂರಿಗೆ ಕರೆತರುವ ಯೋಚನೆ ಮಾಡಿದ್ದರು ದಿಗಂತ್ ಕುಟುಂಬ. ಇದೀಗ ದಿಗಂತ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Live Tv

Comments

Leave a Reply

Your email address will not be published. Required fields are marked *