ಟವೇರಾ – ಇಕೋ ಮುಖಾಮುಖಿ ಡಿಕ್ಕಿ – ದೇವರ ದರ್ಶನ ಮುಗಿಸಿ ಬರ್ತಿದ್ದ ಮೂವರ ದುರ್ಮರಣ

ಚಿಕ್ಕಮಗಳೂರು: ಟವೇರಾ ಹಾಗೂ ಮಾರುತಿ ಇಕೋ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 206ರ ಶಿವಪುರ ಗ್ರಾಮದ ಡಾಬಾ ಬಳಿ ನಡೆದಿದೆ.

ಮೃತರನ್ನ ಮುನಿರಾಜು(65), ಜ್ಯೋತಿ (14) ಹಾಗೂ ಸುಬ್ಬಲಕ್ಷ್ಮಿ (60) ಎಂದು ಗುರುತಿಸಲಾಗಿದೆ. ಜಿಲ್ಲೆಯ ಶಿಡ್ಲಘಟ್ಟ ಮೂಲದ ಆರು ಮಂದಿ ಮಾರುತಿ ಇಕೋ ಕಾರಿನಲ್ಲಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿಗಂಧೂರು ಚೌಡೇಶ್ವರಿ ದೇವಾಲಯಕ್ಕೆ ಹೋಗಿದ್ದರು. ದೇವರ ದರ್ಶನ ಪಡೆದು ಚಿಕ್ಕಬಳ್ಳಾಪುರಕ್ಕೆ ಹಿಂದಿರುಗುವಾಗ ಬೆಂಗಳೂರು ಕಡೆಯಿಂದ ಬರುತ್ತಿದ್ದ ಟವೇರಾ ಮುಖಾಮುಖಿ ಡಿಕ್ಕಿಯಾಗಿದೆ.

ಡಿಕ್ಕಿ ಹೊಡೆದ ಪರಿಣಾಮ ಮಾರುತಿ ಇಕೋ ಕಾರಿನಲ್ಲಿದ್ದ ಶಿಡ್ಲಘಟ್ಟ ಮೂಲದ ಮುನಿರಾಜು, ಜ್ಯೋತಿ ಹಾಗೂ ಸುಬ್ಬಲಕ್ಷ್ಮಿ ಮೂವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಉಳಿದ ಮೂವರಿಗೂ ಗಂಭೀರ ಗಾಯಗಳಾಗಿವೆ. ಇನ್ನು ಟವೇರಾ ಕಾರಿನಲ್ಲಿದ್ದ ಐವರಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಮಾಹಿತಿ ತಿಳಿದು ಬೀರೂರು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *