ಬೈಕ್ ಸವಾರರನ್ನು ಅಟ್ಟಿಸಿಕೊಂಡು ಬಂದ ಹುಲಿ

ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಹುಲಿ ರಕ್ಷಿತಾರಣ್ಯದಲ್ಲಿ ಹೋಗುತ್ತಿದ್ದ ಬೈಕ್ ಸವಾರರನ್ನು ಹುಲಿಯೊಂದು ಅಟ್ಟಿಸಿಕೊಂಡು ಬಂದಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಇರುವ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವೈನಾಡಿನ ಮಧ್ಯೆ ಈ ಘಟನೆ ನಡೆದಿದೆ. ಈ ಮೂಲಕ ಬಂಡೀಪುರ ಮತ್ತು ವೈನಾಡು ಭಾಗದಲ್ಲಿ ಭಾರೀ ಅನಾಹುತ ತಪ್ಪಿದ್ದು, ಹುಲಿ ದಾಳಿಯಿಂದ ದ್ವಿಚಕ್ರ ವಾಹನ ಸವಾರರು ತಪ್ಪಿಸಿಕೊಂಡಿದ್ದಾರೆ.

ದ್ವಿಚಕ್ರ ವಾಹನ ಸವಾರರು ಕಾಡಿನ ಮಧ್ಯೆ ಹೋಗುತ್ತಿದ್ದರು. ಈ ವೇಳೆ ಕಾಡಲ್ಲಿದ್ದ ಹಸಿದ ಹುಲಿ ಬೈಕ್ ಸವಾರರನ್ನು ನೋಡುತ್ತಲೇ ದಾಳಿ ಮಾಡಲು ಬಂದಿದೆ. ದ್ವಿಚಕ್ರ ವಾಹನ ಸವಾರನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ.

ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಹುಲಿ ದಾಳಿ ಮಾಡುವ ದೃಶ್ಯವನ್ನು ತನ್ನ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಸದ್ಯ ಹುಲಿ ದಾಳಿಯಿಂದ ದ್ವಿಚಕ್ರ ವಾಹನ ಸವಾರರು ತಬ್ಬಿಬಾಗಿದ್ದರು.

Comments

Leave a Reply

Your email address will not be published. Required fields are marked *