ಟಿಪ್ಪರ್‌ಗೆ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ

ಬಾಗಲಕೋಟೆ: ನಿಯಂತ್ರಣ ತಪ್ಪಿ ಟಿಪ್ಪರ್‌ಗೆ ಹಿಂಬದಿಯಿಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದ್ದು, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬಾಗಲಕೋಟೆ ತಾಲೂಕಿನ ಬೆನಕಟ್ಟಿ ಗ್ರಾಮದಲ್ಲಿ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್ ಬೆನಕಟ್ಟಿ ಗ್ರಾಮದಿಂದ ಬಾಗಲಕೋಟೆ ಕಡೆ ಹೋಗುತ್ತಿತ್ತು. ಈ ವೇಳೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್‍ನ ಮುಂಭಾಗದ ಗಾಜು ಜಖಂಗೊಂಡು ಪುಡಿ ಪುಡಿ ಆಗಿದೆ.

ಘಟನೆಯಲ್ಲಿ ಭಾರೀ ಅನಾಹುತ ತಪ್ಪಿದಂತಾಗಿದೆ. ಅಪಘಾತದಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ವಿಷಯ ತಿಳಿದು ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Comments

Leave a Reply

Your email address will not be published. Required fields are marked *