ಅವಿಶ್ವಾಸ ಮಂಡನೆಗೂ ಮುನ್ನ ಪ್ರಧಾನಿ ಮೋದಿ ಟ್ವೀಟ್!

ನವದೆಹಲಿ: ಇಂದು ಸಂಸತ್ತಿನಲ್ಲಿ ನಡೆಯುವ ಅವಿಶ್ವಾಸ ಗೊತ್ತುವಳಿಯ ಮಂಡನೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿಯವರು ನನ್ನ ಸಹದ್ಯೋಗಿಗಳು ನಮಗೆ ಬೆಂಬಲ ನೀಡುತ್ತಾರೆಂದು ಟ್ವೀಟ್ ಮಾಡಿದ್ದಾರೆ.

ಬುಧವಾರ ಸಂಸತ್ತಿನಲ್ಲಿ ಮುಂಗಾರು ಅಧಿವೇಶನದಲ್ಲಿ ಅವಿಶ್ವಾಸ ಗೊತ್ತವಳಿಯನ್ನು ಅಂಗೀಕರಿಸಿದ್ದರಿಂದ ಇಂದು ಸಂಸತ್ತಿನಲ್ಲಿ ನಡೆಯಲಿರುವ ಅವಿಶ್ವಾಸ ನಿರ್ಣಯ ಗೊತ್ತುವಳಿ ಕುತೂಹಲ ಕೆರಳಿಸಿದೆ. ಕೇಂದ್ರ ಸರ್ಕಾರದ ವಿರುದ್ಧ ಇಂದು ಅವಿಶ್ವಾಸ ಗೊತ್ತುವಳಿ ಮಂಡನೆಯಾಗುತ್ತಿದ್ದು, ಈ ಕುರಿತು ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ತಮ್ಮ ಅಭಿಪ್ರಾಯ ಹೊರ ಹಾಕಿದ್ದಾರೆ.

“ಭಾರತೀಯ ಸಂಸದೀಯ ವ್ಯವಸ್ಥೆಯಲ್ಲೇ ಇದು ಅತ್ಯಂತ ಪ್ರಮುಖವಾದ ದಿನವಾಗಿದೆ. ನನ್ನ ಸಂಸತ್ ಸಹೋದ್ಯೋಗಿ ಮಿತ್ರರಾದ ಲೋಕಸಭೆ ಸದಸ್ಯರು ರಚನಾತ್ಮಕ, ಸಮಗ್ರ ಮತ್ತು ಅಡೆ-ತಡೆ ಇಲ್ಲದ ಚರ್ಚೆಗೆ ಅವಕಾಶ ಮಾಡಿಕೊಡುತ್ತಾರೆಂದು ನಾನು ನಂಬಿದ್ದೇನೆ. ಈ ವಿಚಾರದಲ್ಲಿ ನಾವು ಜನರಿಗೆ ಬದ್ಧರಾಗಿರಬೇಕು. ಈ ಸನ್ನಿವೇಶವನ್ನು ಇಡೀ ದೇಶ ಅತ್ಯಂತ ಕುತೂಹಲದಿಂದ ನೋಡುತ್ತಿದೆ.” ಎಂದು ಟ್ವೀಟ್ ಮಾಡಿದ್ದಾರೆ.

ಇಂದು 11 ಗಂಟೆಗೆ ಸಂಸತ್ ನಲ್ಲಿ ಅವಿಶ್ವಾಸ ಮಂಡಳಿಯ ಮೇಲೆ ಚರ್ಚೆ ಆರಂಭವಾಗಿದೆ. ನಿಲುವಳಿಯ ಬಗ್ಗೆ ಎಲ್ಲ ಪಕ್ಷಗಳು ತಮ್ಮ ಸದಸ್ಯರಿಗೆ ಈಗಾಗಲೇ ವಿಪ್ ಜಾರಿ ಮಾಡಿವೆ. ಆಡಳಿತರೂಢ ಬಿಜೆಪಿ ಕೂಡ ಈಗಾಗಲೇ ತನ್ನ ಮಿತ್ರ ಪಕ್ಷಗಳನ್ನು ಸಂಪರ್ಕಿಸಿ ಅವಿಶ್ವಾಸ ಮಂಡಳಿಯ ವಿರುದ್ಧ ಮತ ಚಲಾಯಿಸುವಂತೆ ಮನವಿ ಮಾಡಿಕೊಂಡಿದೆ. ಮುನಿಸು ಶಮನ ಮಾಡುವ ಕಾರ್ಯಕ್ಕೂ ಕೈ ಹಾಕಿದೆ ಎಂದು ತಿಳಿದು ಬಂದಿದೆ.

Comments

Leave a Reply

Your email address will not be published. Required fields are marked *