ವಿದ್ಯುತ್ ಕಂಬಗಳನ್ನ ಸಾಗಿಸ್ತಿದ್ದ ಟ್ರ್ಯಾಕ್ಟರ್ ಪಲ್ಟಿ- ಇಂಜಿನ್ ಕೆಳಗಡೆ ಸಿಲುಕಿ ನರಳಾಡಿದ ಚಾಲಕ

ಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಗಳನ್ನ ಸಾಗುಸುತ್ತಿದ್ದ ಟ್ರ್ಯಾಕ್ಟರೊಂದು ಪಲ್ಟಿಯಾಗಿದ್ದು, ಇಂಜಿನ್ ಕೆಳಗಡೆ ಸಿಲುಕಿ ಚಾಲಕ ನರಳಾಡಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಬಳಿ ನಡೆದಿದೆ.

ಹೊಸಕೋಟೆ ಚಿಂತಾಮಣಿ ಹೆದ್ದಾರಿಯ ಸಿದಾರ್ಥ ನಗರ ಬಳಿ ಈ ಅಪಘಾತ ಸಂಭವಿಸಿದೆ. ವಿದ್ಯುತ್ ಕಂಬಗಳನ್ನ ಸಾಗುಸುತ್ತಿದ್ದ ಟ್ರ್ಯಾಕ್ಟರ್ ಇಂಜಿನ್ ಪಲ್ಟಿಯಾಗಿದೆ. ಏಕಾಏಕಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಚಾಲಕ ಇಂಜಿನ್ ಕೆಳಗಡೆ ಸಿಲುಕಿ ನರಳಾಡುತ್ತಿದ್ದನು. ಇದನ್ನು ಗಮನಿಸಿದ ಸಾರ್ವಜನಿಕರು ಚಾಲಕನನ್ನು ಹೊರಕ್ಕೆ ತೆಗೆದು ಸಹಾಯ ಮಾಡಿದ್ದಾರೆ.

ಸರಿಯಾದ ಸಮಯಕ್ಕೆ ಚಾಲಕನ ನೆರವಿಗೆ ಬಂದ ಸಾರ್ವಜನಿಕರು ಆತನನ್ನು ರಕ್ಷಣೆ ಮಾಡಿದ್ದಾರೆ. ಆದ್ದರಿಂದ ಅದೃಷ್ಟವಶಾತ್ ಟ್ರ್ಯಾಕ್ಟರ್ ಚಾಲಕ ರಮೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸದ್ಯ ಈ ಕುರಿತು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *