ಮಂಚಕ್ಕೆ ಬಾರೇ ರೊಮ್ಯಾನ್ಸ್ ಮಾಡೋಣ – ವಿದ್ಯಾರ್ಥಿಗಳಿಗೆ ವಿಂಗ್ ಕಮಾಂಡರ್​ನಿಂದ ಪೋಲಿ ಮೆಸೇಜ್

– ಆ ವಿದ್ಯಾರ್ಥಿನಿಗೆ 5 ತಿಂಗಳಲ್ಲಿ ಮಾಡಿದ್ದು ಬರೋಬ್ಬರಿ 900 ಮೆಸೇಜ್
– ಪೈಲೆಟ್ ಆಗೋ ಕನಸು ಹೊತ್ತ ಹೆಣ್ಣುಮಕ್ಕಳ ಬಾಳುಹಾಳು ಮಾಡೋ ಕಾಮುಕ

ಬೆಂಗಳೂರು: ಜಕ್ಕೂರು ವೈಮಾನಿಕ ತರಬೇತಿ ಕೇಂದ್ರದಲ್ಲಿ ತರಬೇತುದಾರರಾಗಿರುವ ಮಾಜಿ ವಿಂಗ್ ಕಮಾಂಡರ್ ಅಮರ್ಜಿತ್ ಸಿಂಗ್ ಮೇಲೆ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ.

ಅಮರ್ಜಿತ್ ಜಕ್ಕೂರು ವೈಮಾನಿಕ ತರಬೇತಿ ಕೇಂದ್ರದಲ್ಲಿ ತರಬೇತುದಾರರಾಗಿದ್ದು, ಪೈಲೆಟ್ ಆಗುವ ಕನಸು ಹೊತ್ತ ಹೆಣ್ಣುಮಕ್ಕಳ ಬಾಳುಹಾಳು ಮಾಡುತ್ತಿದ್ದಾರೆ ಎಂದ ನೊಂದ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ವಿದ್ಯಾರ್ಥಿನಿಗಳಿಗೆ ಮಂಚಕ್ಕೆ ಬಾರೇ ರೊಮ್ಯಾನ್ಸ್ ಮಾಡೋಣ ಎಂದು ಹೇಳಿ ಬೆಡ್ ರೂಂ ಫೋಟೋ ಕಳುಹಿಸಿ ಕಿರುಕುಳ ನೀಡುತ್ತಿದ್ದಾರೆ ಎನ್ನುವ ಆರೋಪ ಅಮರ್ಜಿತ್ ಸಿಂಗ್ ಮೇಲೆ ಬಂದಿದೆ.

ಸ್ಟೂಡೆಂಟ್ಸ್ ನ್ನು ಮಂಚಕ್ಕೆ ಬಾರೇ ಎಂದು ಕರೆದು ಬೆಡ್ ರೂಂ ಫೋಟೋ ಕಳುಹಿಸುತ್ತಾರೆ. ಅಲ್ಲದೇ ವಿದ್ಯಾರ್ಥಿನಿಗೆ ಐದು ತಿಂಗಳಲ್ಲಿ ಬರೋಬ್ಬರಿ 900 ಮೆಸೇಜ್ ಮಾಡಿದ್ದಾರೆ. ಅಮರ್ಜಿತ್ ವಿದ್ಯಾರ್ಥಿನಿಯರಿಗೆ ಕಳುಹಿಸಿರುವ ಪೋಲಿ ವಾಟ್ಸಪ್ ಮಸೇಜ್ ಗಳ ಸ್ಕ್ರೀನ್ ಶಾಟ್ಸ್ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಲೈಂಗಿಕ ಕಿರುಕುಳ ಆರೋಪ ಅಮರ್‍ಜಿತ್ ಮೇಲೆ ಬರುತ್ತಿರುವುದು ಇದೇ ಮೊದಲಲ್ಲ. ವಿದ್ಯಾರ್ಥಿಗಳು 2017ರಲ್ಲಿ ದೂರು ಕೊಡುತ್ತಿದ್ದಂತೆ ಅಮರ್‍ಜಿತ್ ರಾಜೀನಾಮೆಯನ್ನು ಕೂಡ ಕೊಟ್ಟಿದ್ದರು. ಆದರೆ ಅಮರ್‍ಜಿತ್ ಮೇಲೆ ಕೈ ಮುಖಂಡ, ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಕೃಪಾಕಟಾಕ್ಷವಿದ್ದು ರಾಜೀನಾಮೆ ನೀಡುವುದು ಬೇಡ ಎಂದು ಹೇಳಿದ್ದರಂತೆ. ಹೀಗಾಗಿ ಅಮಾನತು ಆಗಬೇಕಿದ್ದ ಅಮರ್ಜಿತ್ ರಾಜೀನಾಮೆ ನೀಡದೇ ಹುದ್ದೆಯಲ್ಲಿ ಮುಂದುವರಿದಿದ್ದಾರೆ.

ಪ್ರಮೋದ್ ಮದ್ವರಾಜ್ ಬೆನ್ನಿಗೆ ನಿಲ್ಲುತ್ತಿದ್ದಂತೆ ಅಮರ್ಜಿತ್ ಹಿಡಿಯೋರೆ ಇರಲಿಲ್ಲ. ನವೆಂಬರ್ ನಲ್ಲಿ ಅಮರ್ಜಿತ್ ಗುತ್ತಿಗೆ ಅವಧಿ ಮುಗಿದರೂ ಮತ್ತೆ ಮುಂದುವರಿಸಲು ಸರ್ಕಾರ ಆದೇಶ ನೀಡಿದೆ. ತನ್ನ ವಿರುದ್ಧ ಮಾತನಾಡಿದ ಯುವತಿಯರಿಗೆ ಅಮರ್ಜಿತ್ ಸಿಂಗ್ ಗೇಟ್‍ಪಾಸ್ ನೀಡುತ್ತಿದ್ದ ವಿಚಾರ ತಿಳಿದು ಭಯಗೊಂಡು ವಿದ್ಯಾರ್ಥಿನಿಯರು ಸುಮ್ಮನಾಗುತ್ತಿದ್ದರು ಎನ್ನುವ ವಿಚಾರ ತಿಳಿದು ಬಂದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *