ಕಾಂಗ್ರೆಸ್ ಶಾಸಕನ ಮೇಲೆ ಮಾರಣಾಂತಿಕ ಹಲ್ಲೆ – ಬಿಜೆಪಿ ಕಾರ್ಯಕರ್ತರ ಮೇಲೆ ಆರೋಪ

ಅಗರ್ತಲಾ: ಅಗರ್ತಲಾದ ಕಾಂಗ್ರೆಸ್ ಶಾಸಕ ಸುದೀಪ್ ರಾಯ್ ಬರ್ಮಮ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಕೈ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಲ್ಲೆ ನಡೆದಿರುವ ಚಿತ್ರಗಳನ್ನು ಭಾರತೀಯ ಯುವ ಕಾಂಗ್ರೆಸ್ ಟ್ವೀಟ್ ಮೂಲಕ ಹಂಚಿಕೊಂಡಿದೆ. ಅಲ್ಲದೇ ದೇಶದಲ್ಲಿ ಜನಪ್ರತಿನಿಧಿಗಳ ಸುರಕ್ಷತೆಯನ್ನು ಪ್ರಶ್ನಿಸಿದ್ದು, ಬಿಜೆಪಿ ಕಾರ್ಯಕರ್ತರ ವಿರುದ್ಧ ಗೂಂಡಾ ವರ್ತನೆಯ ಆರೋಪ ಮಾಡಿದೆ. ಇದನ್ನೂ ಓದಿ: ಹರ್ ಘರ್ ತಿರಂಗಾ ಅಭಿಯಾನ- ಎಲ್ಲರ ಮನೆ ಮೇಲೆ ತಿರಂಗಾ ಹಾರಿಸುವಂತೆ ಸಿಎಂ ಮನವಿ

ಅಗರ್ತಲಾದ ಶಾಸಕ ಸುದೀಪ್ ರಾಯ್ ಬರ್ಮನ್ ಅವರ ಮೇಲೆ ಬಿಜೆಪಿ ಗೂಂಡಾಗಳಿಂದ ನಡೆದಿರುವ ಹಿಂಸಾತ್ಮಕ ದಾಳಿ ಖಂಡನೀಯ. ಬಿಜೆಪಿ ಕಾರ್ಯಕರ್ತರು ಹಿಂಸಾಚಾರದ ಮೊರೆ ಹೋಗುತ್ತಿರುವುದು ಇದೇ ಮೊದಲೇನಲ್ಲಾ. ಇದು ಕೊಳಕು ರಾಜಕೀಯ ಹಾಗೂ ಈ ರೀತಿ ದೇಶವನ್ನು ಮುನ್ನಡೆಸಲು ಬಯಸುತ್ತಿರುವುದು ನಾಚಿಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಇದನ್ನೂ ಓದಿ: ರಾಜೀವ್‌ ಗಾಂಧಿ ಹತ್ಯೆ ಪ್ರಕರಣ – ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ನಳಿನಿ

ಅಲ್ಲದೇ ಇದು ನಮ್ಮ ಪ್ರಜಾಪ್ರಭುತ್ವಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ. ಬಿಜೆಪಿ ಕಾನೂನು ಮತ್ತು ಸುವ್ಯವಸ್ಥೆಯನ್ನು ತಿರಸ್ಕರಿಸಿ ಪ್ರತಿಪಕ್ಷ ನಾಯಕರ ಮೇಲೆ ಹಲ್ಲೆ ನಡೆಸುತ್ತಿದೆ. ಸದ್ಯ ಶಾಸಕ ಸುದೀಪ್ ರಾಯ್ ಬರ್ಮನ್ ಸುಶಾಂತ ಚಕ್ರವರ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *