ಕಲ್ಲು ತೂರಿ ತೆಲಂಗಾಣ ರಾಷ್ಟ್ರೀಯ ಸಮಿತಿ ಮುಖಂಡನ ಹತ್ಯೆ

ಹೈದರಾಬಾದ್: ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್ ಎಸ್) ಮುಖಂಡ ನಾರಾಯಣ ರೆಡ್ಡಿಯನ್ನು ಕಲ್ಲು ತೂರಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ವಿಕರಾಬಾದ್ ನಲ್ಲಿ ನಡೆದಿದೆ.

ಮಂಗಳವಾರ ಬೆಳಗ್ಗೆ ವಿಕರಾಬಾದ್ ಜಿಲ್ಲೆಯ ಸುಲ್ತಾನಪುರ ಗ್ರಾಮದಲ್ಲಿ ಕಲ್ಲಿನಿಂದ ಹೊಡೆದು, ಹತ್ಯೆ ಮಾಡಿದ ರೀತಿಯಲ್ಲಿ ನಾರಾಯಣ್ ರೆಡ್ಡಿ ಮೃತದೇಹ ಪತ್ತೆಯಾಗಿದೆ. ರೆಡ್ಡಿಯ ಹತ್ಯೆಯ ಸುದ್ದಿ ಹಬ್ಬುತ್ತಲೇ, ಟಿಆರ್‍ಎಸ್ ಕಾರ್ಯಕರ್ತರು ಹತ್ಯೆಗೆ ಸಂಬಂಧಿಸಿದಂತೆ ಕಾಂಗ್ರೆಸ್ಸಿನ ಕೆಲವು ಕಾರ್ಯಕರ್ತರ ಮೇಲೆ ದಾಳಿ ನಡೆಸಿ, ಹಲ್ಲೆ ನಡೆಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಟಿಆರ್ ಎಸ್ ಕಾರ್ಯಕರ್ತರನ್ನು ಚದುರಿಸಿದ್ದಾರೆ. ಅಲ್ಲದೇ ಗಂಭೀರವಾಗಿ ಗಾಯಗೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದಾರೆ.

ನಾರಾಯಣ ರೆಡ್ಡಿ ಹತ್ಯೆ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿಗಳು, ಟಿಆರ್ ಎಸ್ ಮುಖಂಡ ನಾರಾಯಣ ರೆಡ್ಡಿ ಮೃತದೇಹ ಪತ್ತೆಯಾಗಿದ್ದು, ರೆಡ್ಡಿಯವರನ್ನು ಕಲ್ಲಿನಿಂದ ಹೊಡೆದು ಹತ್ಯೆ ಮಾಡಿದ್ದಾರೆ. ಅಲ್ಲದೇ ಈ ಕೊಲೆಯಲ್ಲಿ ಯಾವುದೇ ರಾಜಕೀಯ ವೈಷಮ್ಯ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಘಟನೆ ಸಂಬಂಧ ಕೊಲೆ ಪ್ರಕರಣ ದಾಖಲಾಗಿದ್ದು, ಇದುವರೆಗೂ ಯಾವುದೇ ಆರೋಪಿಗಳನ್ನು ಬಂಧಿಸಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *