ಉಪರಾಷ್ಟ್ರಪತಿ ಚುನಾವಣೆ – ಮಾರ್ಗರೇಟ್ ಆಳ್ವಾಗೆ TRS ಬೆಂಬಲ

ಹೈದರಾಬಾದ್: ಉಪರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರನ್ನು ಬೆಂಬಲಿಸುವುದಾಗಿ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್) ಶುಕ್ರವಾರ ತಿಳಿಸಿದೆ.

ಪಕ್ಷದ ಅಧ್ಯಕ್ಷ ಕೆ. ಚಂದ್ರಶೇಖರ್ ರಾವ್ ಅವರು ಸಂಯುಕ್ತ ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ. ಅದರಂತೆಯೇ ಟಿಆರ್‌ಎಸ್ ಸಂಸದರಿಗೆ ಮತದಾನ ಮಾಡುವಂತೆ ಸೂಚಿಸಲಾಗಿದೆ ಎಂದು ಟಿಆರ್‌ಎಸ್‌ನ ಸಂಸದೀಯ ನಾಯಕ ಕೇಶವ್ ರಾವ್ ಸಂಸತ್ತಿನ ಹೊರಗೆ ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರಧಾನಿ ನಿವಾಸಕ್ಕೆ ಘೆರಾವ್? – ಬೆಲೆ ಏರಿಕೆ ವಿರುದ್ಧ ಹೆಚ್ಚಿದ ಕಿಚ್ಚು

ರಾಷ್ಟ್ರಪತಿ ಚುನಾವಣೆಯಲ್ಲೂ ಟಿಆರ್‌ಎಸ್ ವಿರೋಧ ಪಕ್ಷದ ಪರವಾಗಿ ನಿಂತು ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸಿತ್ತು. ಇಂದು ಸಂಜೆ ಮಾರ್ಗರೇಟ್ ಆಳ್ವಾ ಟಿಆರ್‌ಎಸ್ ಸಂಸದರನ್ನು ಭೇಟಿ ಮಾಡಲಿದ್ದಾರೆ ಎಂದು ರಾವ್ ತಿಳಿಸಿದ್ದಾರೆ. ಇದನ್ನೂ ಓದಿ: ಸತತ 3ನೇ ಬಾರಿ ಆರ್‌ಬಿಐ ರೆಪೊ ದರ ಹೆಚ್ಚಳ

ಆಳ್ವ ಅವರು ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ವಿರುದ್ಧ ಪ್ರತಿಪಕ್ಷಗಳಿಂದ ಉಪರಾಷ್ಟ್ರಪತಿ ಚುನಾವಣೆಗೆ ಕಣಕ್ಕಿಳಿದಿದ್ದಾರೆ.

Live Tv
[brid partner=56869869 player=32851 video=960834 autoplay=true]

Comments

Leave a Reply

Your email address will not be published. Required fields are marked *