ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆದ ಡಿಸಿಎಂ

ತುಮಕೂರು: ಹುಟ್ಟುಹಬ್ಬದ ಪ್ರಯುಕ್ತ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆದರು.

ಬಳಿಕ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ, ವಿಧಾನ ಪರಿಷತ್ ಚುನಾವಣೆಯಲ್ಲಿ ಅನಿಲ್ ಅವರು ಸ್ಪರ್ಧೆಯಿಂದ ಹಿಂದೆ ಸರಿದಿದ್ದೇವೆ ಅಂತ ಪ್ರಕಟಣೆ ಹೊರಡಿಸಿದ್ದಾರೆ. ಅಲ್ಲದೆ ಪೋನ್ ಮಾಡಿ ನಿಮಗೆ ಒಳ್ಳೆಯದಾಗ್ಲಿ ಅಂತ ಶುಭ ಹಾರೈಸಿದ್ದಾರೆ. ಸ್ಪರ್ಧೆಯಿಂದ ಹಿಂದೆ ಸರಿದ ಬಳಿಕ ನನ್ನ ಸಂಪರ್ಕ ಕೂಡ ಮಡಿದರು ಎಂದರು.

ಆಗ ಅನಿಲ್ ಅವರು, ನೀವು ರಾಜ್ಯದ ಉಪಮುಖ್ಯಮಂತ್ರಿಯಿದ್ದೀರಿ ಹಾಗೂ ನಿಮಗೆ ಶಾಸಕರ ಸಂಖ್ಯಾಬಲ ಹೆಚ್ಚಿದೆ. ಅಲ್ಲದೆ ನಮ್ಮ ಎರಡೂ ಪಕ್ಷಗಳಲ್ಲಿ ಸಮನ್ವಯತೆ ಕೊರತೆಯಿದೆ. ಹೀಗಾಗಿ ನಾನು ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ, ನಿಮಗೆ ಒಳ್ಳೆಯದಾಗ್ಲಿ. ಒಟ್ಟಿಗೆ ಸೇರಿ ಕೆಲಸ ಕಾರ್ಯಗಳನ್ನು ಮಾಡೋಣ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ಸಿಗರಲ್ಲಿ ಸಂಖ್ಯಾ ಬಲದ ಕೊರತೆಯಿದೆ. ಹೀಗಾಗಿ ನಾವು ಯಾಕೆ ಸ್ಪರ್ಧೆ ಮಾಡಬೇಕೆಂದು ಆಲೋಚಿಸಿ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಡಿಸಿಎಂ ತಿಳಿಸಿದರು. ಇದೇ ವೇಳೆ ದೇಶದ್ರೋಹದ ಮಾತನಾಡುವವರಿಗೆ ತಕ್ಕಶಾಸ್ತಿಯಾಗಲಿದೆ ಎಂದು ಸಿದ್ದಗಂಗಾ ಮಠದಲ್ಲಿ ಹೇಳಿದ್ದಾರೆ.

Comments

Leave a Reply

Your email address will not be published. Required fields are marked *