ಕಟ್ಟೆಯಲ್ಲಿ ಮುಳುಗಿ ಬಾಲಕರಿಬ್ಬರ ದುರ್ಮರಣ

ತುಮಕೂರು: ಕಟ್ಟೆಯಲ್ಲಿ ಮುಳುಗಿ ಬಾಲಕರಿಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಪಟ್ಟನಾಯಕಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕರನ್ನು ಕಾಮಗೊಂಡನಹಳ್ಳಿಯ ಗ್ರಾಮದ 10 ವರ್ಷದ ಸಲ್ಮಾನ್ ಮತ್ತು 11 ವರ್ಷದ ಮಾರುತಿ ಎಂದು ಗುರುತಿಸಲಾಗಿದೆ. ಈ ಇಬ್ಬರು ಬಾಲಕರು ಪಟ್ಟನಾಯಕಹಳ್ಳಿ ಸರ್ಕಾರಿ ಆಸ್ಪತ್ರೆ ಹಿಂಭಾಗದಲ್ಲಿ ಇರುವ ಕಟ್ಟೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಇಂದು ಭಾನುವಾರವಾಗಿದ್ದು ಶಾಲೆಗೆ ರಜೆ ಇದ್ದ ಕಾರಣ ಸಲ್ಮಾನ್ ಮತ್ತು ಮಾರುತಿ ಆಸ್ಪತ್ರೆಯ ಹಿಂಭಾಗದಲ್ಲಿರುವ ಕಟ್ಟೆಯ ಬಳಿ ಆಟವಾಡಲು ಹೋಗಿದ್ದಾರೆ. ಕಟ್ಟೆಯ ದಡದ ನೀರಿನಲ್ಲಿ ಆಟವಾಡುತ್ತಿದ್ದ ಇಬ್ಬರೂ ಕಾಲುಜಾರಿ ಕಟ್ಟೆಯ ಒಳಗೆ ಬಿದ್ದಿದ್ದಾರೆ. ಆ ಸಮಯದಲ್ಲಿ ಕಟ್ಟೆಯ ಬಳಿ ಯಾರೂ ಇಲ್ಲದ ಕಾರಣ ಬಾಲಕರು ಮೃತಪಟ್ಟಿದ್ದಾರೆ.

ಈ ಘಟನೆ ಪಟ್ಟನಾಯಕಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Comments

Leave a Reply

Your email address will not be published. Required fields are marked *