ದೇಶದಲ್ಲಿ ಕಾಂಗ್ರೆಸ್ ಸ್ಥಿತಿ ಹೇಗಿದೆ ಎಂದು ನನಗೆ ಚೆನ್ನಾಗಿ ಗೊತ್ತು: ಎಚ್‍ಡಿಡಿ

ತುಮಕೂರು: ದೇಶದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಹೇಗಿದೆ ಎಂದು ನನಗೆ ಗೊತ್ತಿದೆ. ನಾನು ದೇಶದ ರಾಜಕೀಯವನ್ನು ನೋಡಿದವನು ಎಂದು ಮಾಜಿ ಪ್ರಧಾನಿ ದೇವೇಗೌಡರು ಕಾಂಗ್ರೆಸ್ಸಿಗೆ ಟಾಂಗ್ ಕೊಟ್ಟಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತುಮಕೂರಿನ ಕೆಲ ಜೆಡಿಎಸ್ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಹೋಗುವ ವದಂತಿ ಇದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ದೇಶದಲ್ಲಿ ಕಾಂಗ್ರೆಸ್ ಹೇಗಿದೆ ಎಂದು ನನಗೆ ಗೊತ್ತಿದೆ. ನಾನು ದೇಶದ ರಾಜಕೀಯ ನೋಡಿದವನು ಎಂದರು. ಅಲ್ಲದೇ ದೆಹಲಿ ಚುನಾವಣೆ ಫಲಿತಾಂಶ ಬಂದ ನಂತರ ಕಾಂಗ್ರೆಸ್ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು.

ಇದೇ ವೇಳೆ ಮೋದಿ ಮತ್ತು ಗೋಡ್ಸೆ ಸಿದ್ಧಾಂತ ಹೋಲಿಕೆ ಮಾಡಿದ ರಾಹುಲ್ ಗಾಂಧಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಲು ದೇವೇಗೌಡರು ನಿರಾಕರಿಸಿದರು. ರಾಹುಲ್ ಗಾಂಧಿ ಯಾವ ಹಿನ್ನಲೆಯಿಂದ ಹೀಗೆ ಹೇಳಿದ್ದಾರೋ ಗೊತ್ತಿಲ್ಲ. ಅದರ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದು ಉತ್ತರಿಸಿದರು.

Comments

Leave a Reply

Your email address will not be published. Required fields are marked *