ಏಪ್ರಿಲ್ ಫೂಲ್ ಅಲ್ಲ, ನಿರ್ಲಕ್ಷ್ಯ ವಹಿಸಿದ್ರೆ ವಾಹನ ಸೀಜ್ ಗ್ಯಾರಂಟಿ: ಡಿಜಿಪಿ ಎಚ್ಚರಿಕೆ

ಬೆಂಗಳೂರು: ದೇಶಾದ್ಯಂತ ಹೇರಲಾಗಿರುವ ಲಾಕ್ ಡೌನ್ ಇನ್ನೂ 14 ದಿನ ಇದ್ದು, ಈ ಮಧ್ಯೆ ರಸ್ತೆಗಿಳಿಯುವವರಿಗೆ ಡಿಜಿಪಿ ಪ್ರವೀಣ್ ಸೂದ್ ಖಡಕ್ ಎಚ್ಚರಿಕೆ ನಿಡಿದ್ದಾರೆ.

ಇದು ಏಪ್ರಿಲ್ ಫೂಲ್ ಅಲ್ಲ. ದ್ವಿ-ಚಕ್ರ ವಾಹನ, ಕಾರು ಮುಂತಾದ ವಾಹನಗಳು ಏಪ್ರಿಲ್ 14ರವರೆಗೆ ರಸ್ತೆಗೆ ಇಳಿಯುವುದನ್ನು ನಿರ್ಬಂಧಿಸಲಾಗಿದೆ. ಒಂದು ವೇಳೆ ನೀವು ಆದೇಶವನ್ನು ಉಲ್ಲಂಘಿಸಿದರೆ ನಿಮ್ಮ ವಾಹನಗಳನ್ನು ಸೀಜ್ ಮಾಡುವುದು ಗ್ಯಾರಂಟಿ ಎಂದು ಟ್ವೀಟ್ ಮಾಡುವ ಮೂಲಕ ಸೂಚನೆ ನೀಡಿದ್ದಾರೆ.

ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೋವಿಡ್ 19 ತಡೆಗಟ್ಟಲು ದೇಶಾದ್ಯಂತ ಲಾಕ್ ಡೌನ್ ಘೋಷಿಸಲಾಗಿದೆ. ಈ ಮಧ್ಯೆಯೂ ಕೆಲವರು ಸುಖಾಸುಮ್ಮನೆ ರಸ್ತೆಯಲ್ಲಿ ತಿರುಗಾಡುತ್ತಿದ್ದಾರೆ.

ಈಗಾಗಲೇ ನಿಯಮ ಉಲ್ಲಂಘಿಸಿ ರಸ್ತೆಗಿಳಿದವರಿಗೆ ಕೆಲವೆಡೆ ಆರತಿ ಬೆಳಗಿದರೆ, ಇನ್ನೂ ಕೆಲವೆಡೆ ಬಸ್ಕಿ ಹೊಡೆಸಿ, ಚರಂಡಿ ಕ್ಲೀನ್ ಹಾಗೂ ಕಸ್ ಗುಡಿಸುವ ಶಿಕ್ಷೆಯನ್ನು ಕೂಡ ಪೊಲೀಸರು ನೀಡಿದ್ದಾರೆ. ಅಲ್ಲದೆ ಕೊರೊನಾ ಮಾದರಿಯ ಹೆಲ್ಮೆಟ್ ಹಾಕಿಕೊಂಡು ಪರಿಸ್ಥಿತಿಯ ಗಂಭಿರತೆಯನ್ನು ಜನರಿಗೆ ಮನದಟ್ಟು ಮಾಡುವ ಪ್ರಯತ್ನ ಕೂಡ ಮಾಡಿದ್ದಾರೆ. ಆದರೂ ಜನ ಕ್ಯಾರೇ ಎನ್ನದೆ ರಸ್ತೆಯಲ್ಲಿ ಅಡ್ಡಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಜಿಪಿ ಈ ಎಚ್ಚರಿಕೆ ನೀಡಿದ್ದಾರೆ.

 

Comments

Leave a Reply

Your email address will not be published. Required fields are marked *