ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬಲಿ- ಮುಗಿಲುಮುಟ್ಟಿದ ಸಂಬಂಧಿಕರ ಆಕ್ರಂದನ

ಮಂಡ್ಯ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗೇಟ್ ಬಳಿ ನಡೆದಿದೆ.

50 ವರ್ಷದ ಬಸವರಾಜ್ ಮತ್ತು 60 ವರ್ಷದ ಸಣ್ಣೇಗೌಡ ಮೃತ ದುರ್ದೈವಿಗಳು. ಮಂಗಳವಾರ ರಾತ್ರಿ ರಾಮನಗರ ಜಿಲ್ಲೆಯ ಯಲಿಯೂರು ಗ್ರಾಮಕ್ಕೆ ಹೋಗಿ ಬೈಕ್‍ನಲ್ಲಿ ವಾಪಸ್ ಬರ್ತಿದ್ರು. ಈ ವೇಳೆ ಬೆಂಗಳೂರು, ಮೈಸೂರು ಹೆದ್ದಾರಿಯಲ್ಲಿ ರುದ್ರಾಕ್ಷಿಪುರ ಗೇಟ್ ಬಳಿ ಬೈಕ್‍ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.

ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಿಬ್ಬರು ಹನುಮಂತಪುರ ಗ್ರಾಮದವರಾಗಿದ್ದು, ಮೃತರ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.

Comments

Leave a Reply

Your email address will not be published. Required fields are marked *