ಈಜಲು ಹೋಗಿ ಜಲಸಮಾಧಿಯಾದ ಬಾಲಕರು

ಬೆಂಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಹಿನ್ನಕ್ಕಿ ಗ್ರಾಮದಲ್ಲಿ ನಡೆದಿದೆ.

ಹಿನ್ನಕ್ಕಿ ಗ್ರಾಮದ ಸಮೀಪದಲ್ಲಿರುವ ಕೆರೆಯಲ್ಲಿ ಈಜಲು ಹೋಗಿದ್ದ ಒರಿಸ್ಸಾ ಮೂಲದ 12 ವರ್ಷದ ಗೌತಮ್ ಮತ್ತು ಹಿನ್ನಕ್ಕಿ ಗ್ರಾಮದ 12 ವರ್ಷದ ಸುಜಿತ್ ಕೆರೆಯಲ್ಲಿ ಮುಳುಗಿ ಸಾವನಪ್ಪಿದ ದುರ್ದೈವಿಗಳು.

ಮಂಗಳವಾರ ಸಂಜೆ ವೇಳೆಯಲ್ಲಿ ಬಾಲಕರು ಕೆರೆಗೆ ಈಜಲು ತೆರಳಿದ್ದಾರೆ. ಆದರೆ ಇಬ್ಬರಿಗೂ ಈಜಲು ಬರದಿರುವುದೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಇಂದು ಬೆಳಗ್ಗೆ ಗ್ರಾಮಸ್ಥರ ಸಹಾಯದಿಂದ ಶವಗಳನ್ನು ಮೇಲೆತ್ತಿದ್ದು ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ನಡೆದ ಸ್ಥಳಕ್ಕೆ ಸೂರ್ಯಸಿಟಿ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Comments

Leave a Reply

Your email address will not be published. Required fields are marked *