ಚಿರಂಜೀವಿ ಸರ್ಜಾ ಅಗಲಿಕೆಗೆ ಎರಡು ವರ್ಷ : ಕುಟುಂಬದಿಂದ ಇಂದು ವಿಶೇಷ ಪೂಜೆ

ನ್ನಡದ ಹೆಸರಾಂತ ನಟ ಚಿರಂಜೀವಿ ಸರ್ಜಾ ಅಗಲಿ ಇಂದಿಗೆ ಎರಡು ವರ್ಷ. ನೆಚ್ಚಿನ ನಟನ ಸಮಾಧಿಗೆ ಇಂದು ಅಭಿಮಾನಿಗಳು ಮತ್ತು ಕುಟುಂಬದ ಸದಸ್ಯರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸರ್ಜಾ ಕುಟುಂಬ ಮತ್ತು ಮೇಘನಾ ರಾಜ್ ಕುಟುಂಬ ಹಾಗೂ ಸ್ನೇಹಿತರು ಇಂದು ಫಾರ್ಮ್ ಹೌಸ್ ನಲ್ಲಿ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದರು.

ಚಿರು ಆಪ್ತರು ಇಂದು ಸೋಷಿಯಲ್ ಮೀಡಿಯಾಗಳಲ್ಲೂ ನೆಚ್ಚಿನ ಗೆಳೆಯನ ಅಗಲಿಕೆಯ ನೋವನ್ನು ಹಂಚಿಕೊಂಡಿದ್ದಾರೆ. ಪನ್ನಗಾಭರಣ, ಸೃಜನ್ ಲೋಕೇಶ್ ಸೇರಿದಂತೆ ಹಲವರು ಚಿರು ಜೊತೆಗಿನ ಒಡನಾಟವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮೋಹಕತಾರೆ ರಮ್ಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್

ಚಿರಂಜೀವಿ ಸರ್ಜಾ ಅವರ ಕೊನೆ ಸಿನಿಮಾ ರಾಜ ಮಾರ್ತಾಂಡ ಇಂದು ಬಿಡುಗಡೆ ಆಗಲಿದೆ ಎಂದು ನಿರೀಕ್ಷೆಯಿತ್ತು. ಆದರೆ, ರಿಲೀಸ್ ಆಗಿಲ್ಲ. ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಈ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಚಿರು ಕೊನೆಯ ಸಿನಿಮಾಗೆ ಸಹೋದರ ಧ್ರುವ ಸರ್ಜಾ ಅವರೇ ಡಬ್ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *