ಸಡನ್ ಬ್ರೇಕ್ ಹಾಕಿದ್ದರಿಂದ ಲಾರಿಗೆ ಕಾರು ಡಿಕ್ಕಿ: ಪ್ರಶ್ನಿಸಲು ಹೋದ ಕಾರು ಚಾಲಕ ಲಾರಿಯಡಿ ಸಿಲುಕಿ ಸಾವು

ಬೆಂಗಳೂರು: ನಗರದ ಯಶವಂತಪುರದಲ್ಲಿ ಶನಿವಾರ ರಾತ್ರೀ ಭೀಕರ ಅಪಘಾತವೊಮದು ಸಂಭವಿಸಿದ್ದು. ಘಟನೆಯಲ್ಲಿ ಉಬರ್ ಕ್ಯಾಬ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅನಿಲ್ ಕುಮಾರ್ ಮೃತ ದುರ್ದೈವಿ ಉಬರ್ ಕ್ಯಾಬ್ ಚಾಲಕ.

ನಡೆದಿದ್ದೇನು?: ನಿನ್ನೆ ರಾತ್ರಿ ಬಿಇಎಲ್ ಫ್ಲೈ ಓವರ್ ಬಳಿ ವೇಗವಾಗಿ ಹೋಗುತ್ತಿದ್ದ ಲಾರಿ ಸಡನ್ ಆಗಿ ಬ್ರೇಕ್ ಹಾಕಿದೆ. ಪರಿಣಾಮ ಹಿಂದುಗಡೆಯಿಂದ ಬರುತ್ತಿದ್ದ ಉಬರ್ ಕ್ಯಾಬ್ ಲಾರಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಕ್ಯಾಬ್ ಚಾಲಕ ಸಿಟ್ಟಿನಿಂದ ಕೆಳಗಿಳಿದು ಲಾರಿ ಚಾಲಕನನ್ನು ಪ್ರಶ್ನೆ ಮಾಡಲು ಹೋಗಿದ್ದಾರೆ. ಆದ್ರೆ ನಿಲ್ಲದೇ ನಿಧಾನವಾಗಿ ಹೋಗುತ್ತಿದ್ದ ಲಾರಿ ಚಕ್ರಕ್ಕೆ ಸಿಲುಕಿ ಕಾರು ಚಾಲಕ ಅನಿಲ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಿಷಯ ತಿಳಿದ ಯಶವಂತಪುರ ಸಂಚಾರಿ ಠಾಣೆ ಪೊಲೀಸ್ರಿಗೆ ಶಾಕ್ ಆಗಿತ್ತು. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ರು ಒಂದು ಕಡೆ ತಾನೇ ಹಿಂದಿನಿಂದ ಆಕ್ಸಿಡೆಂಟ್ ಮಾಡಿದ ಕಾರು ರಸ್ತೆ ಬದಿ ನಿಂತಿದ್ರೆ, ಡ್ರೈವರ್ ಮುಂದೆಯಿದ್ದ ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವುದನ್ನು ಕಂಡು ಶಾಕ್ ಆಗಿತ್ತು. ಬಳಿಕ ಅಲ್ಲಿನ ಸಿಸಿಟಿವಿ ಮತ್ತು ಬೇರೆ ಪ್ರಯಾಣಿಕರ ಬಳಿ ವಿಚಾರಣೆ ಮಾಡಿದಾಗ ಪ್ರಕರಣದ ಸತ್ಯಾಂಶ ಗೊತ್ತಾಗಿದೆ.

ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕನ್ನು ವಶಕ್ಕೆ ಪಡೆದಿದ್ದಾರೆ.

Comments

Leave a Reply

Your email address will not be published. Required fields are marked *