ಹತ್ಯೆಯಾದ ಟೈಲರ್‌ಗೆ 10 ದಿನಗಳ ಹಿಂದೆಯೇ ಬಂದಿತ್ತು ಬೆದರಿಕೆ ಕರೆ!

ಜೈಪುರ: ಮುಸ್ಲಿಂ ಹಂತಕರಿಂದ ಭೀಕರವಾಗಿ ಹತ್ಯೆ ಆಗಿರುವ ಟೈಲರ್ ಕನ್ನಯ್ಯಲಾಲ್‍ಗೆ 10 ದಿನಗಳ ಹಿಂದೆಯೇ ಜೀವ ಬೆದರಿಕೆ ಇರುವ ಬಗ್ಗೆ ದೂರು ನೀಡಲಾಗಿತ್ತು ಎಂಬ ವಿಚಾರವೊಂದು ಇದೀಗ ಬಯಲಾಗಿದೆ.

ದೂರು ಕೊಟ್ಟರೂ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎನ್ನುವ ಆರೋಪಗಳು ಕೇಳಿ ಬಂದಿದೆ. ಹೀಗಾಗಿ ರಾಜಸ್ಥಾನ ಪೊಲೀಸ್ ಮತ್ತು ರಕ್ಷಣೆ ನೀಡದ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ ಕನ್ನಯ್ಯ ಲಾಲ್ ದೂರು ನೀಡಿದ ವೇಳೆ ಭದ್ರತೆ ನೀಡಿದ್ದಲ್ಲಿ ಇಂದು ಹತ್ಯೆಯಾಗುತ್ತಿರಲಿಲ್ಲ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಟೈಲರ್ ಹತ್ಯೆ ಭೀಕರವಾಗಿದೆ, ದಯವಿಟ್ಟು ವೀಡಿಯೋ ವೀಕ್ಷಿಸಬೇಡಿ: ರಾಜಸ್ಥಾನ ಪೊಲೀಸರು ಮನವಿ

46 ವರ್ಷದ ಕನ್ನಯ್ಯ ಲಾಲ್ ಅವರು ಉದಯಪುರ್‍ನಲ್ಲಿರುವ ಮಲ್ಡಾಸ್ ಸ್ಟ್ರೀಟ್‍ನಲ್ಲಿ ಟೈಲರ್ ಆಗಿ ಕೆಲಸ ಮಾಡುತ್ತಿದ್ದರು. ಇವರು 10 ದಿನಗಳ ಹಿಂದೆ ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ ಮಾಡಿದ್ದರು. ಆದರೆ ಇದೊಂದು ವಿವಾದಾತ್ಮಕ ಪೋಸ್ಟ್ ಆಗಿದ್ದರಿಂದ ಬಂಧನಕ್ಕೊಳಗಾಗಿ ಜೈಲು ಸೇರಿದ್ದರು. ಆ ಬಳಿಕ ಜಾಮೀನಿನ ಮೇಲೆ ಹೊರಗೆ ಬಂದು ಮತ್ತೆ ಟೈಲರ್ ಕೆಲಸ ಆರಂಭಿಸಿದ್ದರು. ಈ ವೇಳೆ ಸೋಶಿಯಲ್ ಮಿಡಿಯಾದಲ್ಲಿ ಹಲವರಿಂದ ಜೀವ ಬೆದರಿಕೆ ಸಂದೇಶ ಬಂದಿತ್ತು.

ಬೆದರಿಕೆ ಹಿನ್ನೆಲೆ ಕನ್ನಯ್ಯ ಲಾಲ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಪೊಲೀಸರು ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಇತ್ತ ನಿನ್ನೆ ಬಟ್ಟೆ ಅಳತೆ ನೀಡುವ ನೆಪದಲ್ಲಿ ದುಷ್ಕರ್ಮಿಗಳಿಬ್ಬರು ಬಂದು ಕತ್ತು ಸೀಳಿದ್ದಾರೆ. ಇದೀಗ ಈ ಕೃತ್ಯಕ್ಕೆ ಎಲ್ಲೆಡೆಯಿಂದಲೂ ಖಂಡನೆ ವ್ಯಕ್ತವಾಗುತ್ತಿದೆ. ಭೀಕರ ಘಟನೆ ವಿರೋಧಿಸಿ, ಹಂತಕರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಪ್ರತಿಭಟನೆಗಳು ನಡೆಯುತ್ತಿವೆ. ಇತ್ತ ಆರೋಪ ಕೇಳಿ ಬಂದ ಬೆನ್ನಲ್ಲೇ ದೂರು ದಾಖಲಿಸಲು ನಿರಾಕರಿಸಿದ ಪೊಲೀಸ್‌ ಅಧಿಕಾರಿಯನ್ನು ಕೆಲಸದಿಂದ ವಜಾ ಮಾಡಲಾಗಿದೆ.

Live Tv

Comments

Leave a Reply

Your email address will not be published. Required fields are marked *