ಕೊಲ್ಲೂರಿನಲ್ಲಿ ಡಿಜಿಪಿ ನೀಲಮಣಿ ರಾಜು ಕುಟುಂಬದಿಂದ ಚಂಡಿಕಾಹೋಮ

ಉಡುಪಿ: ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಕುಟುಂಬ ಸಮೇತರಾಗಿ ಕೊಲ್ಲೂರಿಗೆ ಆಗಮಿಸಿ ಚಂಡಿಕಾಹೋಮ ನಡೆಸಿದ್ದಾರೆ. ಪತಿ ನಿವೃತ್ತ ಐಎಎಸ್ ಅಧಿಕಾರಿ ನರಸಿಂಹ ರಾಜು ಜೊತೆಗಿದ್ದರು.

ಬೈಂದೂರು ತಾಲೂಕಿನಲ್ಲಿರುವ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಗೆ ಪತಿ ಡಿ.ಎನ್ ನರಸಿಂಹರಾಜು ಅವರೊಂದಿಗೆ ಸೋಮವಾರ ಸಂಜೆಯೇ ಬಂದು ತಂಗಿದ್ದರು. ಇಂದು ಮುಂಜಾನೆ ಕೊಲ್ಲೂರು ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಬಂದು ದೇವರ ದರ್ಶನ, ಪೂಜೆ ಮಾಡಿಸಿದ್ದಾರೆ.

ಬೆಳಗ್ಗೆ ಏಳು ಗಂಟೆಗೆ ಚಂಡಿಕಾ ಹೋಮದ ಸಂಕಲ್ಪದಲ್ಲಿ ಸ್ವತಃ ಡಿಜಿಪಿ ಪಾಲ್ಗೊಂಡರು. ಸಂಪೂರ್ಣ ಚಂಡಿಕಾ ಹೋಮ ನಡೆಯುವವರೆಗೆ ಪತಿ ಪತ್ನಿ ಯಜ್ಞಶಾಲೆಯಲ್ಲೇ ಎಲ್ಲಾ ವಿಧಿ ವಿಧಾನಗಳಲ್ಲಿ ಭಾಗಿಯಾದರು.

ಡಿಜಿಪಿ ನೀಲಮಣಿ ರಾಜು ದಂಪತಿಗೆ ಕೊಲ್ಲೂರು ದೇವಾಲಯದ ಆಡಳಿತ ಮಂಡಳಿ ಕಡೆಯಿಂದ ಗೌರವ ಸಮರದಪಿಸಲಾಯ್ತು. ನೀಲಮಣಿ ರಾಜು ಈ ಹಿಂದೆಯೇ ಕೊಲ್ಲೂರಿನಲ್ಲಿ ಚಂಡಿಕಾಹೋಮ ನಡೆಸುವ ಹರಕೆ ಹೊತ್ತಿದ್ದರು ಎಂದು ಆಡಳಿತ ಮಂಡಳಿ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದೆ.

Comments

Leave a Reply

Your email address will not be published. Required fields are marked *