ಸ್ವಾತಂತ್ರ್ಯ ದಿನದಂದು ರಾಷ್ಟ್ರಧ್ವಜ ಹಿಡಿದು ಉಡುಪಿ ಶಾಲೆ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಉಡುಪಿ: 134 ವರ್ಷಗಳ ಇತಿಹಾಸವಿರುವ ಉಡುಪಿಯ ಸರ್ಕಾರಿ ಮುಖ್ಯ ಶಾಲೆಯನ್ನು ಬೇರೆಡೆ ಸ್ಥಳಾಂತರಿಸಿದ್ದನ್ನು ವಿರೋಧಿಸಿ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ಮಾಡಿದ್ದಾರೆ.

ಉಡುಪಿ ನಗರದ ನಡುವೆ ಇರುವ 134 ವರ್ಷಗಳ ಇತಿಹಾಸವಿರುವ ಉಡುಪಿಯ ಸರ್ಕಾರಿ ಮೈನ್ ಶಾಲೆಯನ್ನು ಬೇರೆಡೆ ಶಿಫ್ಟ್ ಮಾಡಿದ್ದನ್ನು ವಿರೋಧಿಸಿ ಶಾಲಾ ವಿದ್ಯಾರ್ಥಿಗಳು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ಮಾಡಿದ್ದಾರೆ. ಜಿಲ್ಲಾ ನಾಗರೀಕ ಸಮಿತಿ ನೇತೃತ್ವದಲ್ಲಿ ವಿಭಿನ್ನವಾಗಿ ಪ್ರತಿಭಟಿಸಲಾಯ್ತು. ಕೆಂಪುಕೋಟೆಯ ಮೇಲೆ ಹಾರಿಸಲಾದ ತಿರಂಗದಷ್ಟೆ ಅಳತೆಯ ಧ್ವಜವನ್ನು ಹಿಡಿದು ಪ್ರತಿಭಟನೆ ಮಾಡಲಾಯ್ತು.

ಇದೇ ಸಂದರ್ಭ ಮಾತನಾಡಿದ ಪಬ್ಲಿಕ್ ಹೀರೋ, ಜಿಲ್ಲಾ ನಾಗರೀಕ ಸಮಿತಿ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು ಮಾತನಾಡಿ, ಸ್ವಾತಂತ್ರ್ಯ ಪೂರ್ವ ಶಾಲೆ ಇದು. ರಾಜಕೀಯ ಕಾರಣಕ್ಕೆ ಶಾಲೆಯನ್ನು ಶಿಫ್ಟ್ ಮಾಡಲಾಗಿದೆ ಅಂತ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ರು.

ಉದ್ಯಮಿ ಬಿ.ಆರ್ ಶೆಟ್ಟಿ ಒಡೆತನದ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು ಆಸ್ಪತ್ರೆಯ ಎದುರು ಭಾಗಕ್ಕೆ ಶಾಲೆ ಅಡ್ಡವಾಗುತ್ತದೆ ಎಂಬ ಉದ್ದೇಶದಿಂದ ಶಾಲೆಯನ್ನು ತೆರವುಗೊಳಿಸಲಾಗುತ್ತಿದೆ.

Comments

Leave a Reply

Your email address will not be published. Required fields are marked *