ಸ್ವಚ್ಛ ಭಾರತಕ್ಕೆ ಅವಮಾನ: ಸಾರ್ವಜನಿಕ ಸ್ಥಳದಲ್ಲಿ ಕೇಂದ್ರ ಕೃಷಿ ಸಚಿವರ ಸೂಸು

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ ಭಾರತ ಅಭಿಯಾನಕ್ಕೆ ಈಗ ಕೇಂದ್ರ ಸಚಿವರೊಬ್ಬರು ಸಾರ್ವಜನಿಕವಾಗಿ ಮೂತ್ರ ಮಾಡುವ ಮೂಲಕ ಅವಮಾನ ಮಾಡಿದ್ದಾರೆ.

ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುವ ಮೂಲಕ ಈಗ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.

ರಾಧಾ ಮೋಹನ್ ಸಿಂಗ್ ಬಿಹಾರ ರಾಜ್ಯದ ಪಶ್ಚಿಮ ಚಂಪಾರಣ್ ಪ್ರದೇಶದ ಮೋತಿಹಾರಿ ಎಂಬ ಪ್ರದೇಶಕ್ಕೆ ಭೇಟಿ ನೀಡಿದ್ದರು. ಈ ವೇಳೆ ಸಚಿವರು ಅಂಗರಕ್ಷಕರ ಕಾವಲಿನಲ್ಲಿ ಸಾರ್ವಜನಿಕ ಸ್ಥಳದಲ್ಲಿರುವ ಗೋಡೆಯೊಂದರ ಮರೆಯಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾರೆ.

ಸಚಿವರು ಮೂತ್ರ ವಿಸರ್ಜನೆ ಮಾಡಿರುವ ಫೋಟೋ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾದ್ದು ಸಾಮಾಜಿಕ ಜಾಲತಾಣದಲ್ಲಿ ಜನರು ಅವರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

https://twitter.com/OneTipOneHand_/status/880299681036750848

Comments

Leave a Reply

Your email address will not be published. Required fields are marked *