ಯುಪಿಎಸ್‍ಸಿ ಪರೀಕ್ಷೆಯಲ್ಲಿ 26 ಮಂದಿ ಕನ್ನಡಿಗರು ಪಾಸ್

ಬೆಂಗಳೂರು: ಪ್ರತಿಷ್ಠಿತ ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್‍ಸಿ) ನಡೆಸುವ ದೇಶದ ಅತ್ಯುನ್ನತ ನಾಗರಿಕ ಸೇವಾ ಪರೀಕ್ಷೆಯಲ್ಲಿ ಕರ್ನಾಟಕದ 26 ಮಂದಿ ಆಯ್ಕೆಯಾಗಿದ್ದಾರೆ.

ನಾಗರಿಕ ಸೇವೆಗಳ ನೇಮಕಕ್ಕೆ ನಡೆಸಿದ 2017ನೇ ಸಾಲಿನ ಪರೀಕ್ಷೆಯ ಫಲಿತಾಂಶ ಶುಕ್ರವಾರ ಪ್ರಕಟಗೊಂಡಿದೆ. ಇದರಲ್ಲಿ ತೆಲಂಗಾಣದ ಅನುದೀಪ್ ದುರಿಶೆಟ್ಟಿ ಪ್ರಥಮ ರ‍್ಯಾಂಕ್ ಗಳಿಸಿದ್ದಾರೆ. ರಾಜ್ಯದ 25 ಅಭ್ಯರ್ಥಿಗಳು ವಿವಿಧ ಹಂತದ ರ‍್ಯಾಂಕ್ ಗಳಿಸಿದ್ದು, ಬೀದರ್ ನ ಶಿಂಧೆ 95ನೇ ಸ್ಥಾನ ಪಡೆದಿದ್ದಾರೆ.

ಕನ್ನಡಿಗರ ಪಟ್ಟಿ:
ಕೀರ್ತಿ ಕಿರಣ್ ಪೂಜಾರ್ (115 ರ್ಯಾಂಕ್), ಎಂ.ಶ್ವೇತಾ (119), ಟಿ.ಶುಭಮಂಗಳಾ(147), ಸಿ. ವಿಂಧ್ಯಾ (160), ಕೃತಿಕಾ (194), ಪೃಥ್ವಿಕ್ ಶಂಕರ್ (211), ಬಿ.ಗೋಪಾಲಕೃಷ್ಣ (265), ಎಚ್.ವಿನೋದ್ ಪಾಟೀಲ್ (294), ಎಂ.ಪುನೀತ್ ಕುಟ್ಟಯ್ಯ (324), ಸಿದ್ದಲಿಂಗ ರೆಡ್ಡಿ (346), ಸುದರ್ಶನ ಭಟ್ (434), ಎನ್.ವೈ. ವೃಶಾಂಕ್ (478), ಅಭಿಲಾಷ್ ಶಶಿಕಾಂತ್ ಬದ್ದೂರ್ (531), ನಿಖಿಲ್ ನಿಪ್ಪಾಣಿಕರ್ (563), ಟಿ.ಎನ್. ನಿಥನ್‍ರಾಜ್ (575), ಎಸ್. ಪ್ರೀತಮ್ (654), ಬಿ.ಸಿ. ಹರೀಶ (657), ಆರ್.ವಿಜಯೇಂದ್ರ (666), ಶಿವರಾಜ್ ಸಾಯಿಬಣ್ಣ ಮನಗಿರಿ (784), ಸ್ಪರ್ಶ ನೀಲಾಂಗಿ (805), ಆರ್.ಸಿ. ಹರ್ಷವರ್ಧನ (913), ವೆಂಕಟೇಶ ನಾಯಕ್ (930), ಪಿ.ಪವನ್ (933), ಮಹೇಶ ವದ್ದೆ (958) ರ‍್ಯಾಂಕ್ ಪಡೆದಿದ್ದಾರೆ.

Comments

Leave a Reply

Your email address will not be published. Required fields are marked *