ಪ್ರಯಾಗ್ ಕುಂಭ ಮೇಳದಲ್ಲಿ ಸಿಲಿಂಡರ್ ಸ್ಫೋಟ!

ಲಕ್ನೋ: ಕುಂಭಮೇಳ ಆರಂಭದ ಮುನ್ನಾದಿನವೇ ಉತ್ತರ ಪ್ರದೇಶದ ಪ್ರಯಾಗ್‍ನಲ್ಲಿ ಅನಾಹುತವೊಂದು ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.

ಪ್ರಯಾಗ್‍ನ ದಿಗಂಬರ ಸಾಧುಗಳ ಕ್ಯಾಂಪ್‍ನಲ್ಲಿ ಸುಮಾರು 5 ಕೆ.ಜಿ. ಗ್ಯಾಸ್‍ನ ಸಿಲಿಂಡರ್ ಸ್ಫೋಟಗೊಂಡು ಭಾರೀ ಆತಂಕ ಸೃಷ್ಟಿಸಿತ್ತು. ಸಿಲಿಂಡರ್ ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಶೀಟ್ ನಿಂದ ನಿರ್ಮಿಸಿದ್ದ ಕ್ಯಾಂಪ್‍ಗಳು ನೆಲಕ್ಕೆ ಉರುಳಿದ್ದವು. ಅದೃಷ್ಟವಶಾತ್ ಯಾರೋಬ್ಬರು ಸ್ಫೋಟ ಸಂಭವಿಸಿದ್ದ ಜಾಗದಲ್ಲಿ ಇರಲಿಲ್ಲ. ಹೀಗಾಗಿ ಅನಾಹುತ ಕೈತಪ್ಪಿದೆ.

ಕ್ಯಾಂಪ್ ಮುಂದೆ ಹಾಕಿದ್ದ ಶಾಮಿಯಾನ ಹಾಗೂ ಮಳಿಗೆಗಳಿಗೆ ಬೆಂಕಿ ಹೊತ್ತಿಕೊಂಡಿತ್ತು. ಈ ಕುರಿತು ಕೆಲವರು ಮಾಹಿತಿ ನೀಡುತ್ತಿದ್ದ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳವು ಬೆಂಕಿಯನ್ನು ನಂದಿಸಿದೆ. ಇತ್ತ ಆರೋಗ್ಯ ಇಲಾಖೆ ಕೂಡ ಸುಮಾರು 10 ಆಬುಲೆನ್ಸ್ ಗಳನ್ನು ಕಳುಹಿಸಿತ್ತು.

ಬೆಂಕಿ ಕಾಣಿಸಿಕೊಂಡ ಕೆಲವೇ ನಿಮಿಷದಲ್ಲಿ ನಿಯಂತ್ರಣಕ್ಕೆ ತರಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಹಾಗೂ ಗಾಯಗಳಾದ ಪ್ರಕರಣಗಳು ಪತ್ತೆಯಾಗಿಲ್ಲ. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಯಾಗ್ ಕುಂಭ ಮೇಳದಲ್ಲಿ ದೇಶದ ವಿವಿಧ ಮೂಲೆಗಳಿಂದ ಜನರು ಭಾಗಿಯಾಗುತ್ತಾರೆ. ಸಾಧು, ಸಂತರು, ಜನಸಾಮಾನ್ಯ ಸೇರಿದಂತೆ ಲಕ್ಷಾಂತರ ಜನರು ಕುಂಭ ಮೇಳಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಭಾರೀ ಪ್ರಮಾಣದ ಭದ್ರತೆಯನ್ನು ಒದಗಿಸಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *