ವಾಲ್ಮೀಕಿ ಸಂಘದ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ

ಕೋಲಾರ: ರೈತ ಸಂಘ ಹಾಗೂ ವಾಲ್ಮೀಕಿ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಬೆಡಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

40 ವರ್ಷದ ರಮೇಶ್ ಹಲ್ಲೆಗೊಳಗಾದ ವಾಲ್ಮೀಕಿ ಸಂಘದ ಮುಖಂಡ. ರಮೇಶ್, ರೈತ ಸಂಘ ಕೋಡಿಹಳ್ಳಿ ಚಂದ್ರಶೇಖರ್ ಬಣದ ಸಂಚಾಲಕ ಹಾಗೂ ತಾಲೂಕು ವಾಲ್ಮೀಕಿ ಸಂಘದ ಉಪಾಧ್ಯಕ್ಷರಾಗಿದ್ದಾರೆ. ರಮೇಶ್ ಬೈಕ್ ಅಡ್ಡಗಟ್ಟಿದ್ದ ಅದೇ ಗ್ರಾಮದವರಾದ ವೆಂಕಟೇಶ್, ರಾಮಕೃಷ್ಣಪ್ಪ, ಶ್ರೀನಿವಾಸ್ ಎಂಬವರು ಕಬ್ಬಿಣದ ರಾಡ್ ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಮಾರಣಾಂತಿಕ ಹಲ್ಲೆಗೊಳಗಾದ ರಮೇಶ್‍ರನ್ನು ಹೆಚ್ಚಿನ ಚಿಕಿತ್ಸೆಗೆ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *