ರೈತರ ನೋವನ್ನು ಅರ್ಥಮಾಡಿಕೊಳ್ಳಲು ಅವರ ಮಾತನ್ನು ಆಲಿಸಬೇಕು: ವರುಣ್ ಗಾಂಧಿ

ನವದೆಹಲಿ: ರೈತರ ನೋವನ್ನು ಅರ್ಥಮಾಡಿಕೊಳ್ಳಲು ಮೊದಲು ಅವರ ಮಾತನ್ನು ಆಲಿಸಬೇಕು ಎಂದು ಪಕ್ಷದ ವಿರುದ್ಧ ಬಿಜೆಪಿಯ ಲೋಕಸಭಾ ಸಂಸದ ವರುಣ್ ಗಾಂಧಿ ಮತ್ತೆ ಕಿಡಿಕಾರಿದ್ದಾರೆ.

ಇಂದು ಲಖಿಂಪುರ ಮತ್ತು ಪಿಲಿಭಿತ್ ಗಡಿಭಾಗದ ರೈತರೊಂದಿಗೆ ಅವರ ಸಮಸ್ಯೆಗಳ ಕುರಿತು ಚರ್ಚಿಸಿದರು. ರೈತರ ನೋವಿಗೆ ಕಿವಿಗೊಡಬೇಕು. ರೈತರ ಕಷ್ಟಗಳನ್ನು ತಿಳಿದುಕೊಳ್ಳಲು ಮೊದಲು ಅವರ ಮಾತುಗಳನ್ನು ಕೇಳಿಸಿಕೊಳ್ಳಬೇಕು. ಕನಿಷ್ಠ ಬೆಂಬಲ ಬೆಲೆ ಸಿಗಲಿದೆ ಎಂಬುದಕ್ಕೆ ಕಾನೂನು ರಕ್ಷಣೆ ಬೇಕಾಗಿದೆ. ಇದರಿಂದ ಮಾತ್ರವೇ ಸಗಟು ಮಾರುಕಟ್ಟೆಯಲ್ಲಿ ರೈತರ ಶೋಷಣೆ ತಪ್ಪಲಿದೆ ಎಂದು ಹೇಳಿದರು. ಇದನ್ನೂ ಓದಿ:  ಪಾಕ್ ಪರ ಘೋಷಣೆ- ದೇಶದ್ರೋಹ ಪ್ರಕರಣ ದಾಖಲಿಸಿ ಯುವಕನ ಬಂಧನ

ಕಳೆದ ಕೆಲವು ದಿನಗಳಿಂದ ವರುಣಗಾಂಧಿ ಸತತವಾಗಿ ರೈತರ ಬೇಡಿಕೆಗಳಿಗೆ ಬೆಂಬಲ ನೀಡುತ್ತಿದ್ದಾರೆ. ಇದಕ್ಕೂ ಮುನ್ನ ಅಕ್ಟೋಬರ್ 29ರಂದು ಮಂಡಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದರು. ಪಿಲಿಭಿತ್ ಸೇರಿದಂತೆ 17 ಜಿಲ್ಲೆಗಳಲ್ಲಿ ರೈತ ತನ್ನ ಭತ್ತದ ಬೆಳೆಗೆ ತಾನೇ ಬೆಂಕಿ ಹಚ್ಚುತ್ತಿದ್ದಾನೆ ಎಂದು ಮಂಡಿ ನೌಕರರಿಗೆ ಹೇಳಿದ್ದರು. ಇದು ಇಡೀ ರಾಜ್ಯಕ್ಕೆ ದೊಡ್ಡ ಅವಮಾನ ಎಂದು ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ನೀಟ್ ಫಲಿತಾಂಶ ಪ್ರಕಟ- ಇ-ಮೇಲ್‍ಗೇ ರಿಸಲ್ಟ್

Comments

Leave a Reply

Your email address will not be published. Required fields are marked *