ಮಂಡ್ಯ: ರೈತರನ್ನು ಗೂಂಡಾಗಳೆಂದು ಕರೆಯುವುದಾದರೆ, ಅಧಿಕಾರದಲ್ಲಿರುವ ಬಹುತೇಕ ಸಚಿವರು ಹಾಗೂ ಶಾಸಕರು ಸಹ ಕ್ರಿಮಿನಲ್ ಹಿನ್ನೆಲೆಯುಳ್ಳವರೇ ಎಂದು ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಕಿಡಿಕಾರಿದ್ದಾರೆ.
ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಟಿಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಕಬ್ಬು ಬೆಳೆಗಾರರ ಸಮಸ್ಯೆಯನ್ನು ಕೇವಲ ಒಂದು ಗಂಟೆಯಲ್ಲೇ ಬಗೆ ಹರಿಸಬಹುದು. ಏಕೆಂದರೆ ಬಹುತೇಕ ಸಕ್ಕರೆ ಕಾರ್ಖಾನೆಗಳು ರಾಜಕಾರಣಿಗಳ ಒಡೆತನದಲ್ಲಿವೆ. ಕಾರ್ಖಾನೆಗಳನ್ನು ಹರಾಜು ಮಾಡುತ್ತೀವಿ ಎಂದು ನೋಟಿಸ್ ಕೊಟ್ಟರೇ, ರೈತರ ಹಣ ಬೇಗನೆ ವಸೂಲಿಯಾಗುತ್ತದೆ. ಆದರೆ ಈ ಬಗ್ಗೆ ಸರ್ಕಾರ ಇಚ್ಚಾಶಕ್ತಿ ತೋರುತ್ತಿಲ್ಲ. ಕಬ್ಬು ಬೆಳೆಗಾರರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಿದಿದ್ದರೆ, ಕರ್ನಾಟಕ ಬಂದ್ ಮಾಡಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇದೇ ವೇಳೆ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರೈತರನ್ನು ಗೂಂಡಾಗಳು ಎನ್ನುವುದಾದರೇ, ಅಧಿಕಾರದಲ್ಲಿರುವ ಬಹುತೇಕ ಸಚಿವರು ಹಾಗೂ ಶಾಸಕರು ಕ್ರಿಮಿನಲ್ ಹಿನ್ನೆಲೆಯನ್ನು ಉಳ್ಳವರಾಗಿದ್ದಾರೆ. ಹೋರಾಟದ ವಿಷಯದಲ್ಲಿ ಎಲ್ಲರನ್ನು ದುರ್ಬಿನ್ ಹಾಕಿ ನೋಡಲು ಸಾಧ್ಯವಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್ಬುಕ್ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Leave a Reply