ದೇಶದ ಅನ್ನದಾತರಿಗೆ ವಾಟಾಳ್ ನಾಗರಾಜ್ ಅಭಿನಂದನೆ

ಬೆಂಗಳೂರು: ಕೊನೆಗೂ ಅನ್ನದಾತರ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದಿದ್ದು, ಈ ಹಿನ್ನೆಲೆಯಲ್ಲಿ ರೈತರಿಗೆ ಕನ್ನಡ ಚಳವಳಿ ವಾಟಾಳ್ ಪಕ್ಷ ಅಧ್ಯಕ್ಷ ವಾಟಾಳ್ ನಾಗರಾಜ್ ಅಭಿನಂದನೆ ಸಲ್ಲಿಸಿದ್ದಾರೆ.

PM MODI

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸತತವಾಗಿ 15 ತಿಂಗಳುಗಳಿಂದ ಮೂರು ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ನಡೆಸಿದ ಹೋರಾಟಕ್ಕೆ ದೇಶಾದ್ಯಂತ ರೈತರು, ಹೋರಾಟಗಾರರು ಜೊತೆಗೂಡಿ ಕೇಂದ್ರ ಸರ್ಕಾರದ ಮೊಂಡುತನದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸಿದ್ದರು. ಕರ್ನಾಟಕದಲ್ಲಿ ಕೂಡ ರೈತರ ಪರವಾಗಿ 3 ಕೃಷಿ ಕಾಯ್ದೆ ವಿರುದ್ಧ ಹೋರಾಟ ನಡೆಸಿದ್ದು, ಇದೀಗ ಈ ಹೋರಾಟಕ್ಕೆ ಪ್ರತಿಫಲ ಸಿಕ್ಕಿದೆ. ಹೀಗಾಗಿ ಮತ್ತೊಮ್ಮೆ ದೇಶದ ಅನ್ನದಾತರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೃಷಿ ಕಾಯ್ದೆ ವಾಪಸ್ ಪಡೆದ ಮೋದಿ ಸರ್ಕಾರ

ವಿವಾದಿತ ಕೃಷಿ ಕಾಯ್ದೆಯನ್ನು ವಾಪಸ್ ಪಡೆದುಕೊಂಡಿದೆ. ದೇಶದ ರೈತರ 355 ದಿನಗಳ ಹೋರಾಟದ ನಂತರ ಫಲ ಸಿಕ್ಕಂತಾಗಿದೆ. ಕೃಷಿ ಕಾನೂನು ಹೋರಾಟದಲ್ಲಿ 600ಕ್ಕೂ ಹೆಚ್ಚು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನೂ ಓದಿ: ನಾನು ಭಾರತದ ಕೋವಿಶೀಲ್ಡ್ ವ್ಯಾಕ್ಸಿನ್ ಪಡೆದಿದ್ದೇನೆ: ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಅಬ್ದುಲ್ಲಾ ಶಾಹಿದ್

Comments

Leave a Reply

Your email address will not be published. Required fields are marked *