ಕರುಣಾನಿಧಿ ಆರೋಗ್ಯ ಸ್ಥಿರ: ಚೆನ್ನೈ ಆಸ್ಪತ್ರೆಗೆ ಉಪರಾಷ್ಟ್ರಪತಿ ಭೇಟಿ

ಚೆನ್ನೈ: ಡಿಎಂಕೆ ವರಿಷ್ಠ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ.

94 ವರ್ಷದ ಕರುಣಾನಿಧಿಯವರು ಶುಕ್ರವಾರ ಮೂತ್ರನಾಳದ ಸೋಂಕು ತಗುಲಿ ಜ್ವರದಿಂದ ಬಳಲಿದ್ದು, ನಂತರ ರಕ್ತದೊತ್ತಡ ಕಡಿಮೆಯಾದ ಪರಿಣಾಮ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಂದು ಕಾವೇರಿ ಆಸ್ಪತ್ರೆಗೆ ಖುದ್ದು ಭೇಟಿ ನೀಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ರವರು ಕರುಣಾನಿಧಿಯವರ ಆರೋಗ್ಯ ವಿಚಾರಿಸಿದ್ದಾರೆ. ವೆಂಕಯ್ಯನಾಯ್ಡುರವರ ಭೇಟಿಯ ಫೋಟೊವನ್ನು ಡಿಎಂಕೆ ಬಿಡುಗಡೆಮಾಡಿದೆ.

ವೈದ್ಯರ ತಂಡ ನಿರಂತರ ಮೇಲ್ವಿಚಾರಣೆ ನಡೆಸಿ ಕರುಣಾನಿಧಿಯವರಿಗೆ ಚಿಕಿತ್ಸೆ ನೀಡುತ್ತಿದೆ. ಇಂದು ಕರುಣಾನಿಧಿಯವರು ಹಾಗೂ ಅವರ ಕುಟುಂಬಸ್ಥರು ಮತ್ತು ವೈದ್ಯರ ಬಳಿ ಅವರ ಆರೋಗ್ಯ ವಿಚಾರಿಸಿದ್ದೇನೆ. ವೈದ್ಯರು ಅವರ ಆರೋಗ್ಯ ಸ್ಥಿರವಾಗಿದೆ. ಅವರು ಬೇಗ ಗುಣಮುಖರಾಗಲಿದ್ದಾರೆ ಎಂದು ವಿಪಿಎಸ್ ಸೆಕ್ರೆಟರಿಯೆಟ್ ಟ್ವೀಟ್ ಮಾಡಿ ತಿಳಿಸಿದೆ.

Comments

Leave a Reply

Your email address will not be published. Required fields are marked *