ಸರ್ಕಾರಿ ಆಂಬುಲೆನ್ಸ್ ನಲ್ಲಿ ಮನೆ ಸಾಮಾಗ್ರಿ ಸಾಗಿಸಿದ ವೈದ್ಯ!

ವಿಜಯಪುರ: ಸರ್ಕಾರಿ ಆಂಬುಲೆನ್ಸ್ ನಲ್ಲಿ ವೈದ್ಯ ತನ್ನ ಮನೆ ಸಾಮಗ್ರಿಗಳನ್ನು ಕೊಂಡೊಯ್ಯುತ್ತಿದ್ದ ವೇಳೆ ಸಾರ್ಜಜನಿಕರ ಕೈಗೆ ಸಿಕ್ಕಿ ಬಿದ್ದ ಘಟನೆ ವಿಜಯಪುರದಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಮಂಗಳೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ರವಿ ಕಟ್ಟಿಮನಿ ಎಂಬಾತ ವಿಜಯಪುರದಿಂದ ಮಂಗಳೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬುಲೆನ್ಸ್ ನಲ್ಲಿ ತನ್ನ ಮನೆಯ ಸಾಗ್ರಿಗಳನ್ನು ಕೊಂಡೊಯ್ಯುತ್ತಿದ್ದ. ಈ ವೇಳೆ ವಿಜಯಪುರದ ಹೊರವಲಯದಲ್ಲಿ ಸಾರ್ವಜನಿಕರ ಕೈಗೆ ವೈದ್ಯ ಮತ್ತು ಆಂಬುಲೆನ್ಸ್ ಚಾಲಕ ಸಿಕ್ಕಿ ಬಿದ್ದಿದ್ದಾರೆ.

ಆಂಬುಲೆನ್ಸ್ ನಲ್ಲಿ ಮನೆಯ ಸಾಮಗ್ರಿಗಳನ್ನು ನೋಡಿ ಜನರು ವೈದ್ಯನಿಗೆ ಛೀಮಾರಿ ಹಾಕಿದರು.

https://youtu.be/eVyBwDKejJI

Comments

Leave a Reply

Your email address will not be published. Required fields are marked *