ಸಿಯಾಚಿನ್ ನಲ್ಲಿ ಕರ್ತವ್ಯದ ವೇಳೆ ಉಸಿರುಗಟ್ಟಿ ವಿಜಯಪುರದ ಯೋಧ ಹುತಾತ್ಮ

ವಿಜಯಪುರ: ಕಾಶ್ಮೀರದ ಸಿಯಾಚಿನ್ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಜಯಪುರದ ಯೋಧರೊಬ್ಬರು ಕರ್ತವ್ಯದ ವೇಳೆ ಮೃತಪಟ್ಟಿದ್ದಾರೆ.

ಜಿಲ್ಲೆಯ ಉತ್ನಾಳ ಗ್ರಾಮದ ಕಾಶಿನಾಥ ಕಲ್ಲಪ್ಪ ತಳವಾರ ಹುತಾತ್ಮ ಯೋಧ. ಜಮ್ಮು ಕಾಶ್ಮೀರದ ಸಿಯಾಚಿನ್ ನಲ್ಲಿ ಕರ್ತವ್ಯದ ವೇಳೆ ಉಸಿರುಗಟ್ಟಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಯೋಧನ ಸಾವಿನಿಂದ ಉತ್ನಾಳನದ ಕಾಶಿನಾಥ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ. ಮೃತನ ಕುಟುಂಬದವರು ನೀಡಿರುವ ಮಾಹಿತಿ ಪ್ರಕಾರ ಯೋಧನ ಪಾರ್ಥಿವ ಶರೀರ ನಾಳೆ ಸ್ವಗ್ರಾಮಕ್ಕೆ ತರಲಾಗುತ್ತದೆ.

Comments

Leave a Reply

Your email address will not be published. Required fields are marked *