ಮಂಜಿನ ನಗರಿಯಲ್ಲಿ ಜಾದೂ ಮೂಲಕ ಕೊರೊನಾ ಜಾಗೃತಿ

ಮಡಿಕೇರಿ: ಎಲ್ಲೆಡೆ ತೀವ್ರಗತಿಯಲ್ಲಿ ಹರಡುತ್ತಿರುವ ಕೊರೊನಾ ವೈರಸ್ ಜನರಲ್ಲಿ ಆತಂಕ ಸೃಷ್ಟಿಸುತ್ತಿದೆ. ಸೋಂಕನ್ನು ನಿಯಂತ್ರಿಸಲು ಸರ್ಕಾರಗಳು ಕೂಡ ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಅದಕ್ಕಾಗಿ ನಿರಂತರವಾಗಿ ಜಾಗೃತಿ ಮೂಡಿಸುವ ಕಾರ್ಯಗಳು ಕೂಡ ನಡೆಯುತ್ತಿವೆ. ಅದಕ್ಕೆ ಪೂರಕವಾಗಿ ಮಡಿಕೇರಿಯಲ್ಲಿ ವಿಕ್ರಮ್ ಜಾದುಗಾರ್ ಅವರು ಜಾದೂ ಕಾರ್ಯಕ್ರಮ ಮಾಡುವ ಮೂಲಕ ಜನರಲ್ಲಿ ಕೊರೊನಾ ಸೋಂಕಿನ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಕೊರೊನಾ ವೈರಸ್ ಬಗ್ಗೆ ಆತಂಕದಿಂದ ಹೇಳುವ ಬದಲು ಮನರಂಜನೆಯ ಮೂಲಕ ಹೇಳಿದರೆ ವಿಷಯ ಹೆಚ್ಚು ಜನರನ್ನು ತಲಪುತ್ತದೆ. ಜನರನ್ನು ಹೆಚ್ಚು ಆಕರ್ಷಿತರನ್ನಾಗಿಸಿ ಜಾಗೃತಿ ಮೂಡಿಸಲು ಇದು ಸುಲಭದ ಮಾರ್ಗವಾಗಿದೆ. ಆದ್ದರಿಂದ ವಿಕ್ರಮ್ ಜಾದೂಗಾರ ಅವರು ಮಡಿಕೇರಿಯ ಸಾರ್ವಜನಿಕ ಸ್ಥಳಗಳಲ್ಲಿ ಜಾದೂ ಮಾಡುವ ಮೂಲಕ ಜನರಿಗೆ ಕೊರೊನಾ ಸೋಂಕಿನ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ವೈರಸ್ ಬಗ್ಗೆ ನಾವು ಎಚ್ಚರಿಕೆಯಿಂದ ಇರಬೇಕು, ಶುಚಿತ್ವದ ಕಡೆ ಒತ್ತು ನೀಡಬೇಕು ಎಂದು ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಅಲ್ಲದೇ ವಿರಾಜಪೇಟೆ ತಾಲೂಕಿನ ಸಿದ್ದಾಪುರದ ಅನೇಕ ಹಾಡಿಗಳಿಗೆ ಹೋಗಿ ಕಾಡಿನ ನಿವಾಸಿಗಳಿಗೂ ಕೊರೊನಾ ವೈರಸ್ ಬಗ್ಗೆ ತಿಳಿಸಿ, ಅರಿವು ಮೂಡಿಸುತ್ತೇನೆ ಎಂದು ವಿಕ್ರಮ್ ಅವರು ತಿಳಿಸಿದ್ದಾರೆ.

Comments

Leave a Reply

Your email address will not be published. Required fields are marked *